ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm