ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm