ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm