ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm