ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm