ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am