ಬ್ರೇಕಿಂಗ್ ನ್ಯೂಸ್
13-03-21 12:54 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾರ್ಚ್ 13: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) 2021ರ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಆಗಸ್ಟ್ 1ರಂದು ನೀಟ್ 2021 ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಒಟ್ಟು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.
ಕಳೆದ ವರ್ಷದಂತೆಯೇ ಪೆನ್ ಮತ್ತು ಪತ್ರಿಕೆ ಬಳಸಿಯೇ ಆಫ್ಲೈನ್ ಮಾದರಿಯಲ್ಲಿ ಪರೀಕ್ಷೆ ನಡೆಸುವ ಪ್ರಸ್ತಾಪದಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. 'ನೀಟ್ (ಯುಜಿ)ಅನ್ನು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ಪೆನ್ ಮತ್ತು ಪತ್ರಿಕೆ ಸ್ವರೂಪದಲ್ಲಿ ನಡೆಸಲಾಗುವುದು' ಎಂದು ಎನ್ಟಿಎ ಹೇಳಿಕೆ ತಿಳಿಸಿದೆ.
ಪರೀಕ್ಷೆ ಸಂಬಂಧಿಸಿದಂತೆ ಸಿಲಬಸ್, ವಯೋಮಾನ ಅರ್ಹತೆ ವಿವರ, ಮೀಸಲಾತಿ, ಸೀಟುಗಳು, ಶುಲ್ಕ, ಪರೀಕ್ಷೆ ನಡೆಯುವ ನಗರಗಳು, ರಾಜ್ಯವಾರು ಕೋಡ್ ಮುಂತಾದ ವಿವರಗಳು ಪರೀಕ್ಷೆಯ ಅರ್ಜಿ ಫಾರ್ಮ್ಗಳ ಸಲ್ಲಿಕೆ ಆರಂಭವಾದ ಬಳಿಕ ನೀಟ್ ವೆಬ್ಸೈಟ್ನಲ್ಲಿ ಲಭ್ಯವಾಗಲಿವೆ ಎಂದು ಹೇಳಿದೆ.
ಯಾವ ಭಾಷೆಗಳಲ್ಲಿ ಪರೀಕ್ಷೆ?
ಇಂಗ್ಲಿಷ್, ಹಿಂದಿ, ಕನ್ನಡ, ತೆಲುಗು, ತಮಿಳು, ಮರಾಠಿ, ಬಂಗಾಳಿ, ಗುಜರಾತಿ, ಒಡಿಯಾ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿ ಈ ಬಾರಿಯ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ ನಡೆಯಲಿದೆ. ಆಗಸ್ಟ್ 1ರಂದು ಒಂದೇ ಅವಧಿಯಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗುವುದು ಎಂದು ಎನ್ಟಿಎ ಮಾಹಿತಿ ನೀಡಿದೆ.
ಎರಡು ತಿಂಗಳು ವಿಳಂಬ
ಎನ್ಟಿಎದ ಪ್ರಕಟಣೆಗೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಸಾಮಾನ್ಯವಾಗಿ ಜೂನ್ನಲ್ಲಿ ನೀಟ್ ಪರೀಕ್ಷೆಗಳು ನಡೆಯುತ್ತಿದ್ದವು. ಕೋವಿಡ್ ಕಾರಣದಿಂದಾಗಿ 2020ರಲ್ಲಿ ಒಂದು ತಿಂಗಳು ತಡವಾಗಿ, ಜುಲೈನಲ್ಲಿ ನಡೆದಿತ್ತು. ಆದರೆ ಈ ವರ್ಷ ಸನ್ನಿವೇಶಗಳು ಬದಲಾಗಿದ್ದರೂ ಮತ್ತಷ್ಟು ತಡವಾಗಿ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
NEET (UG) 2021 will be conducted in 11 languages, including Hindi and English through Pen and Paper mode on August 1, 2021 (Sunday).
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm