ಬ್ರೇಕಿಂಗ್ ನ್ಯೂಸ್
13-03-21 03:42 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಮಾ.13: ಮಾಜಿ ಕೇಂದ್ರ ಸಚಿವ, ಬಿಜೆಪಿಯ ಮಾಜಿ ಮುಖಂಡ, ಒಂದು ಕಾಲದ ಥಿಂಕ್ ಟ್ಯಾಂಕ್ ಆಗಿದ್ದ ಯಶವಂತ್ ಸಿನ್ಹಾ ದಿಢೀರ್ ಬೆಳವಣಿಗೆಯಲ್ಲಿ ಟಿಎಂಸಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳಿರುವಾಗ ಟಿಎಂಸಿ ಸೇರಿ ಅಚ್ಚರಿ ಮೂಡಿಸಿದ್ದಾರೆ.
83 ವರ್ಷದ ಯಶವಂತ್ ಸಿನ್ಹಾ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ಆಬಳಿಕ ಮೋದಿ ಸರಕಾರ ಅಧಿಕಾರಕ್ಕೇರಿದ ಬಳಿಕ ಮೂಲೆಗುಂಪಾಗಿದ್ದು, 2018ರಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿ ಸಕ್ರಿಯ ರಾಜಕೀಯದಿಂದ ಹೊರ ತೆರಳಿದ್ದರು. ಇದೀಗ ಟಿಎಂಸಿ ಸೇರ್ಪಡೆಯಾದ ಬಳಿಕ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿನ್ಹಾ, ಈ ವಯಸ್ಸಲ್ಲಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರ್ತೀದ್ದಾರಲ್ಲ ಎಂಬ ಸಹಜ ಪ್ರಶ್ನೆ ನಿಮ್ಮಲ್ಲಿರಬಹುದು. ಬೇರೊಂದು ಪಕ್ಷಕ್ಕೆ ಸೇರಿ ಸಕ್ರಿಯ ರಾಜಕಾರಣಕ್ಕೆ ಬರುತ್ತಿರುವ ಬಗ್ಗೆ ಕುತೂಹಲ ಇರಬಹುದು. ಆದರೆ, ದೇಶದ ಪರಿಸ್ಥಿತಿ ಈಗ ಸಂದಿಗ್ಧ ಸ್ಥಿತಿಯಲ್ಲಿದೆ. ಅದಕ್ಕಾಗಿ ರಾಜಕೀಯದಲ್ಲಿ ಸಕ್ರಿಯವಾಗುತ್ತಿದ್ದೇನೆ ಎಂದಿದ್ದಾರೆ.

ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಅಡಿಗಲ್ಲು, ಆಧಾರ ಸ್ತಂಭಗಳು ದುರ್ಬಲಗೊಳ್ಳುತ್ತಿವೆ. ಚುನಾವಣೆ ಜಯಿಸುವುದಷ್ಟೇ ಈಗಿನ ಬಿಜೆಪಿಯ ಏಕಮಾತ್ರ ಗುರಿಯಾಗಿದೆ. ಅಟಲ್ ಜೀ ಇದ್ದಾಗ ಪಕ್ಷಗಳ ನಡುವೆ ಸಹಮತ ಇತ್ತು. ಈಗಿನ ಮಂದಿ ಇತರ ಪಕ್ಷಗಳನ್ನು ತುಳಿದೇ ಅಧಿಕಾರಕ್ಕೇರಲು ಹವಣಿಸುತ್ತಾರೆ. ಇದೇ ಕಾರಣಕ್ಕೆ ಬಿಜೆಪಿ ಜೊತೆಗಿದ್ದ ಬಿಜೆಡಿ, ಅಕಾಲಿದಳ ಹೊರಗೆ ಉಳಿದಿದೆ. ಈಗ ಬಿಜೆಪಿ ಜೊತೆಗೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಯಶವಂತ್ ಸಿನ್ಹಾ ಬಿಜೆಪಿಯಿಂದ ದೂರವುಳಿದಿದ್ದರೂ, ಅವರ ಜಯಂತ್ ಸಿನ್ಹಾ ಜಾರ್ಖಂಡಿನ ಹಝಾರಿಬಾಗ್ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದ ವೇಳೆ ವಿಮಾನ ಯಾನ ಮತ್ತು ಹಣಕಾಸು ಖಾತೆಯಲ್ಲಿ ರಾಜ್ಯ ಸಚಿವರಾಗಿದ್ದರು. 2019ರಲ್ಲಿ ಮರು ಆಯ್ಕೆಯಾಗಿದ್ದರೂ, ಜಯಂತ್ ಸಿನ್ಹಾಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಿಲ್ಲ.
ಈ ನಡುವೆ, ಯಶವಂತ್ ಸಿನ್ಹಾ ಈಗಿನ ಬಿಜೆಪಿಯ ವಿರುದ್ಧ ಕಟು ಟೀಕಾಕಾರರಾಗಿ ಬದಲಾಗಿದ್ದರು. ಈಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಕೆಲವೇ ದಿನಗಳಿರುವಾಗ ಬದ್ಧ ಪ್ರತಿಸ್ಪರ್ಧಿ ಟಿಎಂಸಿ ಪಕ್ಷ ಸೇರಿ ಟಾಂಗ್ ನೀಡಿದ್ದಾರೆ. ಬಂಗಾಳದಲ್ಲಿ ಏಳು ಹಂತದ ಚುನಾವಣೆಯಿದ್ದು ಮೊದಲ ಮತದಾನ ಮಾ.27ರಂದು ನಡೆಯಲಿದೆ.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm