ಬ್ರೇಕಿಂಗ್ ನ್ಯೂಸ್
13-03-21 03:42 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಮಾ.13: ಮಾಜಿ ಕೇಂದ್ರ ಸಚಿವ, ಬಿಜೆಪಿಯ ಮಾಜಿ ಮುಖಂಡ, ಒಂದು ಕಾಲದ ಥಿಂಕ್ ಟ್ಯಾಂಕ್ ಆಗಿದ್ದ ಯಶವಂತ್ ಸಿನ್ಹಾ ದಿಢೀರ್ ಬೆಳವಣಿಗೆಯಲ್ಲಿ ಟಿಎಂಸಿ ಪಕ್ಷ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳಿರುವಾಗ ಟಿಎಂಸಿ ಸೇರಿ ಅಚ್ಚರಿ ಮೂಡಿಸಿದ್ದಾರೆ.
83 ವರ್ಷದ ಯಶವಂತ್ ಸಿನ್ಹಾ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ಆಬಳಿಕ ಮೋದಿ ಸರಕಾರ ಅಧಿಕಾರಕ್ಕೇರಿದ ಬಳಿಕ ಮೂಲೆಗುಂಪಾಗಿದ್ದು, 2018ರಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿ ಸಕ್ರಿಯ ರಾಜಕೀಯದಿಂದ ಹೊರ ತೆರಳಿದ್ದರು. ಇದೀಗ ಟಿಎಂಸಿ ಸೇರ್ಪಡೆಯಾದ ಬಳಿಕ ಇದೇ ವಿಚಾರದ ಬಗ್ಗೆ ಮಾತನಾಡಿದ ಸಿನ್ಹಾ, ಈ ವಯಸ್ಸಲ್ಲಿ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರ್ತೀದ್ದಾರಲ್ಲ ಎಂಬ ಸಹಜ ಪ್ರಶ್ನೆ ನಿಮ್ಮಲ್ಲಿರಬಹುದು. ಬೇರೊಂದು ಪಕ್ಷಕ್ಕೆ ಸೇರಿ ಸಕ್ರಿಯ ರಾಜಕಾರಣಕ್ಕೆ ಬರುತ್ತಿರುವ ಬಗ್ಗೆ ಕುತೂಹಲ ಇರಬಹುದು. ಆದರೆ, ದೇಶದ ಪರಿಸ್ಥಿತಿ ಈಗ ಸಂದಿಗ್ಧ ಸ್ಥಿತಿಯಲ್ಲಿದೆ. ಅದಕ್ಕಾಗಿ ರಾಜಕೀಯದಲ್ಲಿ ಸಕ್ರಿಯವಾಗುತ್ತಿದ್ದೇನೆ ಎಂದಿದ್ದಾರೆ.

ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಅಡಿಗಲ್ಲು, ಆಧಾರ ಸ್ತಂಭಗಳು ದುರ್ಬಲಗೊಳ್ಳುತ್ತಿವೆ. ಚುನಾವಣೆ ಜಯಿಸುವುದಷ್ಟೇ ಈಗಿನ ಬಿಜೆಪಿಯ ಏಕಮಾತ್ರ ಗುರಿಯಾಗಿದೆ. ಅಟಲ್ ಜೀ ಇದ್ದಾಗ ಪಕ್ಷಗಳ ನಡುವೆ ಸಹಮತ ಇತ್ತು. ಈಗಿನ ಮಂದಿ ಇತರ ಪಕ್ಷಗಳನ್ನು ತುಳಿದೇ ಅಧಿಕಾರಕ್ಕೇರಲು ಹವಣಿಸುತ್ತಾರೆ. ಇದೇ ಕಾರಣಕ್ಕೆ ಬಿಜೆಪಿ ಜೊತೆಗಿದ್ದ ಬಿಜೆಡಿ, ಅಕಾಲಿದಳ ಹೊರಗೆ ಉಳಿದಿದೆ. ಈಗ ಬಿಜೆಪಿ ಜೊತೆಗೆ ಯಾರಿದ್ದಾರೆ ಎಂದು ಪ್ರಶ್ನಿಸಿದರು.
ಯಶವಂತ್ ಸಿನ್ಹಾ ಬಿಜೆಪಿಯಿಂದ ದೂರವುಳಿದಿದ್ದರೂ, ಅವರ ಜಯಂತ್ ಸಿನ್ಹಾ ಜಾರ್ಖಂಡಿನ ಹಝಾರಿಬಾಗ್ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದ ವೇಳೆ ವಿಮಾನ ಯಾನ ಮತ್ತು ಹಣಕಾಸು ಖಾತೆಯಲ್ಲಿ ರಾಜ್ಯ ಸಚಿವರಾಗಿದ್ದರು. 2019ರಲ್ಲಿ ಮರು ಆಯ್ಕೆಯಾಗಿದ್ದರೂ, ಜಯಂತ್ ಸಿನ್ಹಾಗೆ ಸಚಿವ ಸ್ಥಾನದ ಜವಾಬ್ದಾರಿ ನೀಡಿಲ್ಲ.
ಈ ನಡುವೆ, ಯಶವಂತ್ ಸಿನ್ಹಾ ಈಗಿನ ಬಿಜೆಪಿಯ ವಿರುದ್ಧ ಕಟು ಟೀಕಾಕಾರರಾಗಿ ಬದಲಾಗಿದ್ದರು. ಈಗ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಕೆಲವೇ ದಿನಗಳಿರುವಾಗ ಬದ್ಧ ಪ್ರತಿಸ್ಪರ್ಧಿ ಟಿಎಂಸಿ ಪಕ್ಷ ಸೇರಿ ಟಾಂಗ್ ನೀಡಿದ್ದಾರೆ. ಬಂಗಾಳದಲ್ಲಿ ಏಳು ಹಂತದ ಚುನಾವಣೆಯಿದ್ದು ಮೊದಲ ಮತದಾನ ಮಾ.27ರಂದು ನಡೆಯಲಿದೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm