ಬ್ರೇಕಿಂಗ್ ನ್ಯೂಸ್
15-03-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.15: ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.

ದಾಳಿ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ದುಷ್ಕøತ್ಯ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ.

ಪಾಕ್ನ ಈ ಒಳಸಂಚಿಗೆ ಕರ್ನಾಟಕ, ದೆಹಲಿ ಮತ್ತು ಕೇರಳದ ಹಲವಾರು ಯುವಕರು ಬಲಿಯಾಗಿ ದೇಶದ್ರೋಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎನ್ಐಎಗೆ ಗುಮಾನಿ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆಖಾಡಕ್ಕೆ ಇಳಿದ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಸೆರೆ ಸಿಕ್ಕಿರುವ ಐವರನ್ನು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರು ಹಲವಾರು ವಿಚಾರಗಳ ಬಗ್ಗೆ ಬಾಯ್ಬಿಟ್ಟಿದ್ದು, ಅವರ ಮಾಹಿತಿಯನ್ನಾಧರಿಸಿ ತನಿಖೆ ತೀವ್ರಗೊಳಿಸಲಾಗಿದೆ.
Raids are being conducted by the National Investigation Agency (NIA) at seven locations in Delhi, Kerala and Karnataka against a module of the Islamic State (IS). NIA sources said that the multiple agency sleuths are carrying out searches at 10 locations, including at least one in Delhi.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm