ಬ್ರೇಕಿಂಗ್ ನ್ಯೂಸ್
17-03-21 05:30 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.17: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಂ ರಾಜಕಾರಣಿ ಕಮಲ್ ಹಾಸನ್ ಈ ಬಾರಿ ಕಣದಲ್ಲಿರುವ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸ್ಥಾಪಕ ಮತ್ತು ಮುಖ್ಯಸ್ಥರಾಗಿರುವ ಕಮಲಹಾಸನ್, ಕೊಯಂಬತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಈಗಾಗ್ಲೇ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ತಮ್ಮ ಆಸ್ತಿ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು 45 ಕೋಟಿಗೂ ಹೆಚ್ಚು ಚರ ಆಸ್ತಿಯನ್ನು ಹೊಂದಿದ್ದಾಗಿ ತಿಳಿಸಿದ್ದಾರೆ.
ಕಮಲಹಾಸನ್ ಸೇರಿದಂತೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಡಿಸಿಎಂ ಒ. ಪನ್ನೀರ್ ಸೆಲ್ವಂ ಚುನಾವಣಾ ಕಣದಲ್ಲಿದ್ದು , ಎಪ್ರಿಲ್ 6ರಂದು ಇವರ ಭವಿಷ್ಯವನ್ನು ಜನರು ನಿರ್ಧರಿಸಲಿದ್ದಾರೆ.

ಸಿಎಂ ಪಳನಿಸ್ವಾಮಿ ಎಡಪ್ಪಾಡಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ತಮ್ಮ ಚರ ಆಸ್ತಿ 47 ಲಕ್ಷ ಇರುವುದಾಗಿ ಹೇಳಿಕೊಂಡಿದ್ದಾರೆ. ಯಾವುದೇ ಸ್ಥಿರ ಆಸ್ತಿ ಹೊಂದಿಲ್ಲ ಎಂದಿದ್ದಾರೆ. ಇದೇ ವೇಳೆ, ತನ್ನ ಪತ್ನಿ ಹೆಸರಲ್ಲಿ 1.14 ಕೋಟಿ ಚರ ಆಸ್ತಿ ಮತ್ತು ತಮ್ಮ ಹಿಂದು ಅವಿಭಕ್ತ ಕುಟುಂಬದಲ್ಲಿ 50.21 ಲಕ್ಷ ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಪತ್ನಿ ಹೆಸರಲ್ಲಿ 1.78 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಬಗ್ಗೆ ತಿಳಿಸಿದ್ದಾರೆ. ಅಲ್ಲದೆ, 15 ಲಕ್ಷ ಕೈಸಾಲ ಹೊಂದಿರುವುದಾಗಿ ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.

ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತನ್ನಲ್ಲಿ 4.94 ಕೋಟಿ ರೂ. ಬ್ಯಾಂಕ್ ಖಾತೆಯಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಭೂಮಿ, ಕಟ್ಟಡಗಳು ಸೇರಿದಂತೆ 2.24 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಹೇಳಿದ್ದಾರೆ. ಕೊಲ್ತೂರು ಕ್ಷೇತ್ರದಲ್ಲಿ ಮೂರನೇ ಬಾರಿ ಕಣಕ್ಕಿಳಿದಿರುವ ಸ್ಟಾಲಿನ್, ತನ್ನ ಪತ್ನಿಯಲ್ಲಿ 30.52 ಲಕ್ಷ ರೂ. ಬ್ಯಾಂಕ್ ನಗದು ಹಾಗೂ 24.77 ಲಕ್ಷದ ಚಿನ್ನಾಭರಣ ಇರುವುದಾಗಿ ಹೇಳಿಕೊಂಡಿದ್ದಾರೆ. 50 ಸಾವಿರ ನಗದು ಕೈಯಲ್ಲಿದೆ, ಯಾವುದೇ ಬ್ಯಾಂಕ್ ಸಾಲ ಹೊಂದಿಲ್ಲ. ತನ್ನ ಹೆಸರಲ್ಲಿ ವಾಹನವನ್ನೂ ಹೊಂದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
Actor-turned-politician and leader of Makkal Needhi Maiam Kamal Haasan is the richest among the candidates who have filed nominations till Monday for the forthcoming assembly polls in Tamil Nadu.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm