ಬ್ರೇಕಿಂಗ್ ನ್ಯೂಸ್
18-03-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.18: ನಮ್ಮಲ್ಲಿ ಸರಕಾರಿ ನೌಕರರು ಅಂದ್ರೆ ಸ್ವರ್ಗದಿಂದ ಕೆಳಗಿಳಿದು ಬಂದವರ ರೀತಿ. ಹೆಚ್ಚಿನ ಮಂದಿಗೆ ಹೊತ್ತು ಗೊತ್ತು ಅನ್ನುವುದಂತೂ ಇರುವುದೇ ಇಲ್ಲ. ಆದರೆ, ಸಮಯದ ಪರಿಪಾಲನೆ, ಕೆಲಸದಲ್ಲಿ ಪ್ರಾಮಾಣಿಕತೆಗೆ ಜಗತ್ತಿನಲ್ಲೇ ಹೆಸರಾಗಿರುವ ಜಪಾನಲ್ಲಿ ಸರಕಾರಿ ನೌಕರಿಯಂದ್ರೆ, ಅಷ್ಟೇ ಪರಿಪಕ್ವ. ಅಲ್ಲಿನ ಒಂದು ಇಲಾಖೆಯಲ್ಲಿ ಕೆಲಸ ಮುಗಿಸಿ ನಿಗದಿಗಿಂತ ಎರಡು ನಿಮಿಷ ಬೇಗನೇ ಮನೆಗೆ ಹೊರಟಿದ್ದಕ್ಕೆ ಸಿಬಂದಿಯ ಸಂಬಳವನ್ನೇ ಕಡಿತ ಮಾಡಿರುವ ಪ್ರಸಂಗ ವರದಿಯಾಗಿದೆ.
ಜಪಾನ್ ದೇಶದ ಶಿಕ್ಷಣ ಇಲಾಖೆಯ ಫುನಬಾಶಿ ಸಿಟಿ ಬೋರ್ಡ್, ತನ್ನ ಸಿಬಂದಿ ಎರಡು ನಿಮಿಷ ಬೇಗನೆ ಹೊರಟಿದ್ದಕ್ಕೆ ತಿಂಗಳ ವೇತನದಲ್ಲಿ ಹತ್ತನೇ ಒಂದು ಭಾಗದಷ್ಟು ಕಡಿತ ಮಾಡಿರುವ ಸುದ್ದಿ ಜಗತ್ತಿನ ಗಮನ ಸೆಳೆದಿದೆ. ಮೇ 2019ರಿಂದ 2020ರ ಜನವರಿ ಮಧ್ಯೆ ಈ ರೀತಿಯ 316 ಪ್ರಕರಣಗಳನ್ನು ಇಲಾಖೆ ಪತ್ತೆ ಮಾಡಿದ್ದು, ಏಳು ಸಿಬಂದಿ ಈ ರೀತಿ ಬೇಗನೇ ನಿರ್ಗಮಿಸಿದ್ದನ್ನು ಪತ್ತೆ ಹಚ್ಚಿ ವೇತನಕ್ಕೆ ಕತ್ತರಿ ಹಾಕಿದೆ.

ಸಂಜೆ 5.15ಕ್ಕೆ ಕೆಲಸ ಮುಗಿಸಿ ನಿರ್ಗಮಿಸುವ ಸಮಯವಾಗಿದ್ದರೆ, ಎರಡು ನಿಮಿಷ ಮೊದಲೇ 5.15ಕ್ಕೆ ಕೆಲವು ಸಿಬಂದಿಗಳು ತೆರಳುತ್ತಿದ್ದರು. ಮನೆಗೆ ತೆರಳುವ ಬಸ್ ಬೇಗ ಇರುವುದರಿಂದ ಹೀಗೆ ಮಾಡುತ್ತಿದ್ದರು. 5.17ಕ್ಕೆ ಬಸ್ ಬರುತ್ತೆ. ಅದಕ್ಕಾಗಿ ಎರಡು ನಿಮಿಷ ಬೇಗನೆ ಹೋಗುತ್ತಿದ್ದೆವು. ಅದು ಬಸ್ ತಪ್ಪಿದರೆ, ಬಳಿಕ ಅರ್ಧ ಗಂಟೆ ಕಾಯಬೇಕಾಗುತ್ತದೆ ಎಂದು ಸಿಬಂದಿ ಈ ಬಗ್ಗೆ ಮೇಲಧಿಕಾರಿಗಳಿಗೆ ಲಿಖಿತ ಸ್ಪಷ್ಟನೆ ಕೊಟ್ಟಿದ್ದರು.
ಆದರೆ, ಮಾರ್ಚ್ 10ರಂದು ಫುನಬಾಶಿ ಸಿಟಿ ಬೋರ್ಡ್, ಸಮಯಕ್ಕೆ ಮುಂಚಿತವಾಗಿ ಹೊರಡುತ್ತಿದ್ದ ಕೌನ್ಸಿಲರ್ ಸೇರಿದಂತೆ ಸಿಬಂದಿಯ ಮೂರು ತಿಂಗಳ ವೇತನದಲ್ಲಿ ಹತ್ತನೇ ಒಂದು ಭಾಗದಷ್ಟು ಕಡಿತ ಮಾಡಿ ಆದೇಶ ಮಾಡಿತ್ತು. ಎರಡು ನಿಮಿಷಕ್ಕಾಗಿ ಸರಕಾರಿ ನೌಕರರ ವೇತನ ಕಡಿತ ಮಾಡಿದ್ದು ಜಪಾನ್ ಟುಡೇ ಪತ್ರಿಕೆಯಲ್ಲಿ ಸುದ್ದಿಯಾಗಿದೆ. ಭಾರತಕ್ಕೆ ಅನ್ವಯಿಸಿದರೆ, ಈ ರೀತಿಯ ವೇತನ ಕಡಿತವಾಗಲೀ, ಸಿಬಂದಿ ಎರಡು ನಿಮಿಷಕ್ಕೂ ಮಹತ್ವ ಕೊಡುವುದನ್ನು ನಿರೀಕ್ಷೆ ಮಾಡುವುದೇ ಅಸಾಧ್ಯ ಎನ್ನುವಂತಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm