ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm