ಬ್ರೇಕಿಂಗ್ ನ್ಯೂಸ್
20-08-20 07:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 20: ತಂದೆಯ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಅಂತ ಎಸ್ಪಿಬಿ ಪುತ್ರ ಚರಣ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಮತ್ತೆ ಎಸ್ ಪಿ ಬಿಯವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿಯನ್ನ ಕೊಟ್ಟಿದ್ದಾರೆ.
ತಂದೆಯ ಆರೋಗ್ಯದಲ್ಲಿ ಯಾವುದೇ ರೀತಿ ಚೇತರಿಕೆ ಕಾಣ್ತಿಲ್ಲ. ಆದ್ರೂ ನಮಗೆ ನಂಬಿಕೆ ಇದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಅವ್ರು ಚೇತರಿಸಿಕೊಂಡು ದೇವರು, ಅಭಿಮಾನಿಗಳ ಆಶೀರ್ವಾದದಿಂದ ಅನಾರೋಗ್ಯ ಗೆದ್ದು ಬರ್ತಾರೆ. ಎಲ್ಲಾ ಚಿತ್ರರಂಗ, ಸಂಗೀತ ನಿರ್ದೇಶಕರ ತಂಡಕ್ಕೂ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸಂಜೆ 6 ಗಂಟೆಗೆ ಗಾನ ಸಂಕಲ್ಪದ ಪ್ರಾರ್ಥನೆಗೂ ಧನ್ಯವಾದಗಳು. ನಮ್ಮ ಕುಟುಂಬಸ್ಥರಿಂದ ನಿಮ್ಮೆಲ್ಲರಿಗೂ ಧನ್ಯವಾದ. ನಾವು ಎಲ್ಲರಿಗೂ ಚಿರರುಣಿಯಾಗಿದ್ದೇವೆ. ಇಡೀ ದೇಶವೇ ತುಂಬಾ ಪ್ರೀತಿಯಿಂದ ಪ್ರಾರ್ಥಿಸುತ್ತಿದ್ದೀರಾ ಎಂದು ದುಃಖತಪ್ತರಾಗಿ ಚರಣ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಇನ್ನು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಇಂದು ವಿಶ್ವಾದ್ಯಂತ ಅವರ ಅಭಿಮಾನಿಗಳು ‘ಸಾಮೂಹಿಕ ಪ್ರಾರ್ಥನೆ’ ನಡೆಸಲಿದ್ದಾರೆ.
74 ವರ್ಷ ಪ್ರಾಯದ ಈ ಶ್ರೇಷ್ಠ ಗಾಯಕನ ಆರೋಗ್ಯ ಚೇತರಿಕೆಗಾಗಿ ಈ ಪ್ರಾರ್ಥನೆ ನಡೆಯಲಿದೆ. ನಿರ್ದೇಶಕ ಭರತ್ ರಾಜ್ ಅವರು ಈ ಸಾಮೂಹಿಕ ಪ್ರಾರ್ಥನೆಯ ಕರೆಯನ್ನು ನೀಡಿದ್ದಾರೆ.
ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಗಾಯಕ ಎಸ್.ಪಿ.ಬಿ ಅವರು ಆಗಸ್ಟ್ 5ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು.
‘ಗುರುವಾರ ಸಾಯಂಕಾಲ 6 ಗಂಟೆಗೆ ಸರಿಯಾಗಿ ಭಾರತವೂ ಸೇರಿದಂತೆ ವಿಶ್ವಾದ್ಯಂತ ಇರುವ ಎಸ್.ಪಿ.ಬಿ ಅಭಿಮಾನಿಗಳು ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ನಿರ್ದೇಶಕ ಭರತ್ ರಾಜ್ ತಿಳಿಸಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am