ಬ್ರೇಕಿಂಗ್ ನ್ಯೂಸ್
31-07-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ: ರಕ್ಷಾ ಬಂಧನದ ಪ್ರಯುಕ್ತ ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿಯನ್ನು ಕಳುಹಿಸಿದ್ದಾರೆ.
ಶೈಖ್ ಅವರು ಕಳೆದ 25 ವರ್ಷಗಳಿಂದ ಪ್ರತಿ ರಕ್ಷಾ ಬಂಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿಸುತ್ತಿದ್ದು, ಭಾರತದಿಂದ ಆಹ್ವಾನ ನೀಡಿದರೆ ದೆಹಲಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ವರ್ಷಕ್ಕೊಂದು ಬಾರಿ ನನ್ನ ಹಿರಿಯ ಸಹೋದರನಿಗೆ ರಾಖಿ ಕಟ್ಟುವ ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ಮುಂದಿನ ಐದು ವರ್ಷಗಳು ಅವರಿಗೆ ಉತ್ತಮವಾಗಿರಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಧನಾತ್ಮಕ ನಿರ್ಧಾರವನ್ನು ವಿಶ್ವವೇ ಗುರುತಿಸುತ್ತಿದೆ ಎಂದು ಕಳೆದ ವರ್ಷ ಅವರು ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದರು. ಇದಕ್ಕೂ ಮುನ್ನ ಭಾರತದಲ್ಲಿ ತ್ರಿವಳಿ ತಲಾಖ್ ನಿಷೇಧಿಸುವ ಭಾರತ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಿದ್ದಾರೆ. ಅಲ್ಲದೆ ಪತಿ ರಚಿಸಿದ ಪೇಂಟಿಂಗ್ನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆ ನೀಡಲು ಉತ್ಸುಕರಾಗಿದ್ದಾರಂತೆ.
ಖುರಾನ್ ಹಾಗೂ ಇಸ್ಲಾಂನಲ್ಲಿ ತ್ರಿವಳಿ ತಲಾಖ್ ಕುರಿತು ನಿಬಂಧನೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಹೊರತು ಇನ್ನಾರೂ ತ್ರಿವಳಿ ತಲಾಖ್ ನಿಷೇಧಿಸುವ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಮುಸ್ಲಿಂ ಮಹಿಳೆಯರ ಹಿತದೃಷ್ಟಿಯಿಂದ ಮೋದಿಯವರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ತ್ರಿವಳಿ ತಲಾಖ್ ಕುರಿತ ಕಾನೂನು ರೂಪಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದುಪಡಿಸಿದ ಭಾರತ ಸರ್ಕಾರದ ನಿರ್ಧಾರವನ್ನೂ ಶೈಖ್ ಶ್ಲಾಘಿಸಿದ್ದಾರೆ. ಕಳೆದ 25 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಳುಹಿಸುತ್ತಿರುವ ಶೈಖ್ ಅವರು, ಜಮ್ಮು ಕಾಶ್ಮೀರದ ಕುರಿತು ಭಾರತದ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ವಿರೋಧಿಸುತ್ತಿರುವುದರ ಮಧ್ಯೆಯೂ ಈ ನಡೆ ಅನುಸರಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.
ಆಗಸ್ಟ್ 3ರಂದು ರಕ್ಷಾ ಬಂಧನ ಆಚರಿಸಲಾಗುತ್ತಿದ್ದು, ಮಹಿಳಾ ಕುಶಲಕರ್ಮಿಗಳು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಲ್ವಾನ್ನ ಗಡಿ ವಾಸ್ತವ ರೇಖೆ(ಎಲ್ಎಸಿ)ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕರಿಗೆ ರಾಖಿಯನ್ನು ಕಳುಹಿಸಿದ್ದಾರೆ. ಹೀಗೆ ರಕ್ಷಾ ಬಂಧನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm