ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm