ಬ್ರೇಕಿಂಗ್ ನ್ಯೂಸ್
26-03-21 10:01 am Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ 26: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ.
ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.
ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.
Four members of a family committed suicide in Telangana's Mancherial district. The tragic incident occurred in the Malkapalli village of Kasipeta mandal of the district on Thursday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm