ಬ್ರೇಕಿಂಗ್ ನ್ಯೂಸ್
29-03-21 05:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.29: ಆಫ್ರಿಕಾ ಮತ್ತು ಯುರೋಪ್ ಖಂಡವನ್ನು ಬೇರ್ಪಡಿಸುವ ಸುಯೆಜ್ ಕಾಲುವೆಯಲ್ಲಿ ಒಂದು ವಾರದಿಂದ ಸಿಕ್ಕಿಕೊಂಡಿದ್ದ ಬೃಹತ್ ಹಡಗನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆದಿದೆ. 70 ಶೇಕಡಾ ತೆರವು ಕಾರ್ಯ ನಡೆದಿದೆ ಎಂದು ಸುಯೆಜ್ ಕಾಲುವೆ ಅಥಾರಿಟಿ ಅಧಿಕಾರಿಗಳು ತಿಳಿಸಿದ್ದಾರೆ.


ಎವರ್ ಗೀವನ್ ಎನ್ನುವ ಹೆಸರಿನ ಬೃಹತ್ ಕಂಟೇನರ್ ಹಡಗು ಈಜಿಪ್ಟ್ ಬಳಿಯ ಸುಯೆಜ್ ಕಾಲುವೆಯಲ್ಲಿ ವಾರದ ಹಿಂದೆ ಸಿಕ್ಕಿಕೊಂಡಿತ್ತು. ಇದರಿಂದಾಗಿ ಯುರೋಪ್ ಮತ್ತು ಮಧ್ಯ ಪ್ರಾಚ್ಯ ದೇಶಗಳಿಂದ ಸಾಗುವ ಹಡಗುಗಳ ಸಂಚಾರಕ್ಕೆ ತೊಡಕಾಗಿದ್ದು, ಭಾರೀ ವೈಪರೀತ್ಯ ಉಂಟಾಗಿತ್ತು. ಹಡಗು ಕಾಲುವೆಯಿಂದ ಸಾಗುತ್ತಿದ್ದಾಗ ಅಡಿಭಾಗದ ಮರಳಿನಲ್ಲಿ ಹೂತಿದ್ದರಿಂದ ಅಲ್ಲೇ ಉಳಿದುಕೊಂಡಿತ್ತು.

ಕಾಲುವೆಯಲ್ಲಿ ಅಡ್ಡಲಾಗಿ ಹಡಗು ನಿಂತಿದ್ದರಿಂದ ಇತರೇ ಹಡಗುಗಳ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಎರಡೂ ಭಾಗದಲ್ಲಿ ಸುಮಾರು 450 ರಷ್ಟು ಹಡಗುಗಳು ಅಲ್ಲಿ ಸಿಕ್ಕಿಕೊಂಡು ಸರದಿ ನಿಂತಿದ್ದವು. ಇದರಿಂದಾಗಿ 9 ಬಿಲಿಯನ್ ಡಾಲರ್ ನಷ್ಟವಾಗಿತ್ತು. ಯುರೋಪ್ ಭಾಗದ ರಾಷ್ಟ್ರಗಳಿಂದ ಭಾರತ ಇನ್ನಿತರ ಪೂರ್ವ ರಾಷ್ಟ್ರಗಳಿಗೆ ವ್ಯಾಪಾರ ಸಂಬಂಧ ಸಾಗುವ ಹಡಗುಗಳು ಸುಯೆಜ್ ಕಾಲುವೆಯಲ್ಲಿ ಸಾಗುತ್ತವೆ.


ಆಫ್ರಿಕಾ ಮತ್ತು ಯುರೋಪ್ ಖಂಡದ ಮಧ್ಯೆ ಇರುವ ಸಪೂರ ಹಾದಿಯಾಗಿರುವ ಸುಯೆಜ್ ಕಾಲುವೆ ಈಜಿಪ್ಟ್ ದೇಶದ ವ್ಯಾಪ್ತಿಗೆ ಸೇರುತ್ತದೆ. ಅಲ್ಲಿನ ಕಾಲುವೆಯ ಮೂಲಕ ಸಾಗಿದರೆ, ಆಫ್ರಿಕಾವನ್ನು ಸುತ್ತುಹಾಕಿ ಸಾಗಬೇಕಾಗಿಲ್ಲ. ಆಫ್ರಿಕಾವನ್ನು ಸುತ್ತುಹಾಕಿ ಹಡಗು ಸಂಚರಿಸಿದರೆ, ಒಂದು ಹಡಗು ಭಾರತದಿಂದ ಇಂಗ್ಲೆಂಡ್ ತಲುಪಬೇಕಿದ್ದರೆ 34 ದಿನ(25 ಸಾವಿರ ಕಿಮೀ) ಬೇಕಾಗುತ್ತದೆ. ಸುಯೆಜ್ ಕಾಲುವೆಯಲ್ಲಿ ಸಾಗಿದರೆ 25 ದಿನಗಳಲ್ಲಿ(18 ಸಾವಿರ ಕಿಮೀ) ತಲುಪಬಹುದು. ಹೀಗಾಗಿ ಸರಕು ಸಾಗಾಟದ ಹಡಗುಗಳು ಹೆಚ್ಚಾಗಿ ಪೂರ್ವದಿಂದ ಪಶ್ಚಿಮ ರಾಷ್ಟ್ರಗಳಿಗೆ ತೆರಳಲು ಸುಯೆಜ್ ಕಾಲುವೆಯನ್ನೇ ಬಳಸುತ್ತವೆ.
The stern of a huge container ship that has been wedged across the Suez Canal for almost a week has been freed from the shoreline, officials say.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm