ಬ್ರೇಕಿಂಗ್ ನ್ಯೂಸ್
31-03-21 02:35 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.31: ಆಧಾರ್ ಮತ್ತು ಪಾನ್ ಕಾರ್ಡ್ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿಲ್ಲವೇ ? ಲಿಂಕ್ ಮಾಡಲು ನೀಡಿದ್ದ ಗಡುವು ಇಂದಿಗೆ ಕೊನೆಗೊಂಡಿದ್ದು, ಎಪ್ರಿಲ್ 1ರಿಂದ ಭಾರೀ ದಂಡ ತೆರಬೇಕಾಗುತ್ತದೆ.
ಮಾರ್ಚ್ 31ರ ಮಧ್ಯರಾತ್ರಿ ಒಳಗೆ ಲಿಂಕ್ ಆಗಿಲ್ಲದಿದ್ದರೆ ಎಪ್ರಿಲ್ ಒಂದರಿಂದಲೇ ದಂಡ ವಿಧಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಪಾನ್ ಕಾರ್ಡ್ ಹೊಂದಿರುವ ಪ್ರತಿ ವ್ಯಕ್ತಿಯೂ ತನ್ನ ಆಧಾರ್ ಜೊತೆಗೆ ಲಿಂಕ್ ಮಾಡಿಸಿರಬೇಕು. ಇಲ್ಲದೇ ಇದ್ದರೆ, ಈ ಬಾರಿ ಲೋಕಸಭೆ ಜಾರಿಗೆ ತಂದಿರುವ ಫೈನಾನ್ಸ್ ಬಿಲ್ ಪ್ರಕಾರ ಪ್ರತಿ ವ್ಯಕ್ತಿಯ ಮೇಲೆ ದಂಡ ವಿಧಿಸಲು ಅಧಿಕಾರಿಗಳಿಗೆ ಅವಕಾಶ ನೀಡುತ್ತದೆ. ಇದಲ್ಲದೆ, ಯಾವುದೇ ಪಾನ್ ಕಾರ್ಡ್ ಆಧಾರ್ ಜೊತೆಗೆ ಲಿಂಕ್ ಆಗದೇ ಇದ್ದರೆ ತನ್ನಿಂತಾನೇ ಅಸ್ತಿತ್ವ ಕಳಕೊಳ್ಳಲಿದೆ.

ಯಾವುದೇ ಬ್ಯಾಂಕ್ ವಹಿವಾಟಿಗೆ ಪಾನ್ ಕಾರ್ಡ್ ಅಗತ್ಯವಾಗಿರುವುದರಿಂದ ಪಾನ್ ನಂಬರ್ ಇಲ್ಲದೆ ವಹಿವಾಟು ಸಾಧ್ಯವಿಲ್ಲ. 50 ಸಾವಿರಕ್ಕಿಂತ ಮೇಲಿನ ಹಣದ ವಹಿವಾಟು ನಡೆಸಲು ಪಾನ್ ಕಾರ್ಡ್ ಅಗತ್ಯವಾಗಿರುತ್ತದೆ. ಹೀಗಾಗಿ ಪಾನ್ ಕಾರ್ಡ್ ಎಲ್ಲ ರೀತಿಯ ವಹಿವಾಟುಗಳಿಗೆ ಈಗ ಕಡ್ಡಾಯ ಮಾಡಲಾಗಿದೆ. ಕಳೆದ 2017ರ ಜುಲೈನಲ್ಲಿ ಪಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಲಾಗಿತ್ತು. ಆಬಳಿಕ ಸರಣಿಯಂತೆ ಹಲವು ಬಾರಿ ಗಡುವು ನೀಡಲಾಗಿದ್ದು, 2021ರ ಮಾರ್ಚ್ 31 ಕೊನೆಯ ದಿನವಾಗಿರುತ್ತದೆ.

ಆದರೆ, ಪಾನ್ ಲಿಂಕ್ ಮಾಡಿಲ್ಲದ ಸಾಮಾನ್ಯ ನಾಗರಿಕರಿಗೆ ದಂಡದ ಮೊತ್ತ ಒಂದು ಸಾವಿರ ಮೀರದ ಹಾಗೆ ವಿಧಿಸಲು ಸೂಚನೆ ನೀಡಲಾಗಿದೆ. ಅದೇ ಸಂದರ್ಭದಲ್ಲಿ ಯಾವ ವ್ಯಕ್ತಿ ಆದಾಯ ತೆರಿಗೆ ಕಟ್ಟಬಲ್ಲವನಾಗಿದ್ದು, ಪಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳದೆ ತನ್ನ ಬ್ಯಾಂಕ್ ಅಕೌಂಟನ್ನು ಪ್ರತ್ಯೇಕವಾಗಿ ಇರಿಸಿದ್ದು ಕಂಡುಬಂದರೆ ಆತನಿಗೆ ಹತ್ತು ಸಾವಿರದ ವರೆಗೂ ದಂಡ ವಿಧಿಸಬಹುದು. ಇದಲ್ಲದೆ, ಇದೇ ವೇಳೆ ಪಾನ್ ಕಾರ್ಡ್ ಲಿಂಕ್ ಆಗದೆ ಅಸ್ತಿತ್ವ ಕಳಕೊಂಡಲ್ಲಿ ಅದನ್ನು ಮತ್ತೆ ಪಡೆಯಬೇಕಿದ್ದಲ್ಲಿ ದುಪ್ಪಟ್ಟು ದಂಡ ವಿಧಿಸುವ ಪ್ರಸ್ತಾಪವೂ ಕಾನೂನಿನಲ್ಲಿದೆ.
ಆದಾಯ ತೆರಿಗೆ ವಿಚಾರದಲ್ಲಿ ಪಾರದರ್ಶಕ ತರುವ ನಿಟ್ಟಿನಲ್ಲಿ ಇದೇ ಮಾರ್ಚ್ 23ರಂದು ನೂತನ ಹಣಕಾಸು ಮಸೂದೆಯನ್ನು ಕೇಂದ್ರ ಸರಕಾರ ದೇಶದಲ್ಲಿ ಜಾರಿಗೆ ತಂದಿದೆ.
The last date for linking the Permanent Account Number (PAN) to Aadhaar is tomorrow - March 31, 2021, otherwise the PAN card is likely to become invalid. If not linked, one may also be liable to pay a penalty of Rs 1,000 as per the Finance Bill 2021.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm