ಬ್ರೇಕಿಂಗ್ ನ್ಯೂಸ್
05-04-21 07:33 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.5: ಕೇರಳದಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬೆಳಗ್ಗೆ 7ರಿಂದ ಸಂಜೆ 7ರ ವರೆಗೂ ಮತದಾನಕ್ಕೆ ಸಮಯ ನಿಗದಿ ನೀಡಲಾಗಿದೆ. ಸಂಜೆ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದ್ದು, ಕೋವಿಡ್ ಪೀಡಿತರು, ಸಂಪರ್ಕಿತರಿಗಾಗಿ ಸಂಜೆಯ ಸಮಯವನ್ನು ಮೀಸಲು ಇರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, 1591 ಬೂತ್ ಗಳನ್ನು ಮಾಡಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಎಪ್ರಿಲ್ 5ರಂದೇ ಸಿದ್ಧತೆ ಪೂರ್ಣಗೊಂಡಿದ್ದು ಚುನಾವಣಾ ಕರ್ತವ್ಯದ ಸಿಬಂದಿ ಮತಗಟ್ಟೆಯಲ್ಲೇ ಎರಡು ದಿನ ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ಹೊಂದಿರುವ ಮತಕ್ಷೇತ್ರಗಳಿಂದ ಇವಿಎಂ ಮೆಷಿನ್ ಸೇರಿದಂತೆ ಮತ ಯಂತ್ರಗಳು, ಕಂಪ್ಯೂಟರ್, ಇನ್ನಿತರ ಪರಿಕರಗಳನ್ನು ಸಿಬಂದಿ ಎಪ್ರಿಲ್ 5ರಂದು ಆಯಾ ಮತಗಟ್ಟೆಗೆ ತಲುಪಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 10,59,907 ಮತದಾರರಿದ್ದಾರೆ. ಅದರಲ್ಲಿ 5,18501 ಪುರುಷರು ಹಾಗೂ 5,41,460 ಮಹಿಳಾ ಮತದಾರರಿದ್ದಾರೆ. ಆರು ಮಂದಿ ಮಂಗಳಮುಖಿಯರಿದ್ದಾರೆ. ಒಟ್ಟು ಜಿಲ್ಲೆಯಲ್ಲಿ 9700 ಮಂದಿ ಸಿಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.

ಮಂಜೇಶ್ವರ ಕ್ಷೇತ್ರದಲ್ಲಿ 2,21,682 ಮತದಾರರಿದ್ದು ಇದರಲ್ಲಿ 1,10,682 ಮಂದಿ ಮಹಿಳೆಯರು. ಕಾಸರಗೋಡು ಕ್ಷೇತ್ರದಲ್ಲಿ 2,01812 ಮತದಾರರಿದ್ದು ಅದರಲ್ಲಿ 102233 ಮಹಿಳಾ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ 64 ಮತಗಟ್ಟೆಗಳನ್ನು ಅತೀ ಸೂಕ್ಷ್ಮ ಎಂದು ಗುರುತಿಸಲಾಗಿದ್ದು, 738 ಬೂತ್ ಗಳಲ್ಲಿ ಅಧಿಕಾರಿಗಳು ಲೈವ್ ಆಗಿ ವೀಕ್ಷಣೆ ಮತ್ತು ನಿಗಾ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಳಿದಂತೆ 851 ಬೂತ್ ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಇದಕ್ಕಾಗಿ 3400 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 712 ಮಂದಿ ಸಿಆರ್ ಪಿಎಫ್ ಪಡೆಯ ಸಿಬಂದಿಯನ್ನೂ ಆಯಕಟ್ಟಿನ ಕ್ಷೇತ್ರಗಳಲ್ಲಿ ನಿಗಾ ಇರಿಸಲಾಗಿದೆ.
After weeks-long campaign sessions, marathon rallies and mammoth road shows, Kerala is all set to go to polls on Tuesday with 2.74 crore voters exercising their franchise to decide the fate of 957 candidates including high-profile leaders and independents in 140 Assembly constituencies across the state.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm