ಬ್ರೇಕಿಂಗ್ ನ್ಯೂಸ್
22-08-20 11:02 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ ಸರಕಾರ ವಿಶ್ವ ಸಂಸ್ಥೆ ಮತ್ತು ವಿಶ್ವ ರಾಷ್ಟ್ರಗಳಿಗೆ ಹಾಕಿದ ಒತ್ತಡಕ್ಕೆ ಕೊನೆಗೂ ಫಲ ಸಿಕ್ಕಿದೆ. ಪಾಕಿಸ್ಥಾನ ಕಡೆಗೂ ತನ್ನಲ್ಲಿರುವ 88 ಉಗ್ರರ ಪಟ್ಟಿಯನ್ನು ವಿಶ್ವ ಸಂಸ್ಥೆಗೆ ನೀಡಿದ್ದು ಉಗ್ರರಿಗೆ ಆರ್ಥಿಕ ನಿರ್ಬಂಧ ವಿಧಿಸುವುದಾಗಿ ಹೇಳಿಕೊಂಡಿದೆ. ಇದೇ ವೇಳೆ, ಈ ಪಟ್ಟಿಯಲ್ಲಿ ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನೂ ಆ ಪಟ್ಟಿಗೆ ಸೇರಿಸಿದ್ದು ದಾವೂದ್ ಪಾಕಿಸ್ಥಾನದಲ್ಲೇ ಇರುವುದನ್ನು ಒಪ್ಪಿಕೊಂಡಿದೆ.
1993ರ ಮುಂಬೈ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ಅಡಗಿರುವುದಾಗಿ ಭಾರತ ಹಿಂದಿನಿಂದಲೂ ಹೇಳುತ್ತಾ ಬಂದಿತ್ತು. ಆದರೆ, ಪಾಕ್ ಸರಕಾರ ಮಾತ್ರ ದಾವೂದ್ ಪಾಕಿಸ್ತಾನದ ನೆಲದಲ್ಲಿ ಇಲ್ಲ ಎಂದೇ ವಾದಿಸಿತ್ತು. ಈಗ 88 ಮಂದಿಯ ವಿಳಾಸ ಸಹಿತ ಹೆಸರನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ದಾವೂದ್ ವಿಳಾಸ ಕರಾಚಿ, ಕ್ಲಿಫ್ಟನ್ ಮಾರ್ಕೆಟ್ ಏರಿಯಾ ಎಂದು ನಮೂದಿಸಿರುವುದು ಆತನ ಬಗ್ಗೆ ಸುಳ್ಳಾಡುತ್ತಾ ಬಂದ ಪಾಕ್ ಬಣ್ಣವನ್ನು ಬಯಲು ಮಾಡಿದೆ.
ಈಗ ಉಗ್ರರ ವಿಚಾರದಲ್ಲಿ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕ್ ಸರಕಾರ ಈಗ ಉಗ್ರರು, ಉಗ್ರ ಸಂಘಟನೆಗಳು ಸೇರಿ 88 ಮಂದಿಯನ್ನು ಗ್ರೇ ಲಿಸ್ಟ್ ಗೆ ಸೇರಿಸಿ ಆದೇಶ ಮಾಡಿದೆ. ಈ ಮೂಲಕ ಉಗ್ರರು ಅಥವಾ ಸಂಘಟನೆಗಳು ವಿದೇಶಗಳಿಂದ ಹಣ ಪಡೆಯುವಂತಿಲ್ಲ. ಪಾಕ್ ನೆಲದಲ್ಲಿ ಹಣದ ವಹಿವಾಟು ಮಾಡುವಂತೆಯೂ ಇಲ್ಲ. ಇವರ ಮೇಲೆ ಆರ್ಥಿಕ ನಿರ್ಬಂಧ ಹೇರಿದ್ದಾಗಿ ಪಾಕ್ ಹೇಳಿಕೊಂಡಿದೆ. ಇದರಲ್ಲಿ ಮುಂಬೈ ದಾಳಿಗೆ ಸಂಚು ನಡೆಸಿದ್ದ ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್, ಜೈಶ್ ಇ - ಮಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಕೂಡ ಸೇರಿದ್ದಾನೆ. ಅಲ್ಲದೆ, ಉಗ್ರ ಸಂಘಟನೆಗಳಾದ ಜಮಾತ್ ಉದ್ ದಾವಾ, ಜೆಇಎಂ, ತಾಲಿಬಾನ್, ಡಾಯೆಶ್, ಹಕ್ಕಾನಿ ಗ್ರೂಪ್, ಅಲ್ ಕಾಯಿದಾ ಮತ್ತಿತರ ಮುಂಚೂಣಿ ಗುಂಪುಗಳು ಸೇರಿವೆ.
ಭಾರತದ ಪ್ರಧಾನಿ ಮೋದಿ ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಪಾಕಿಸ್ಥಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಪರಿಗಣಿಸುವಂತೆ ಒತ್ತಡ ಹೇರಿದ್ದರು. ಅಲ್ಲದೆ, ವಿಶ್ವಸಂಸ್ಥೆಯಲ್ಲಿ ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಯಾವುದೇ ರಾಷ್ಟ್ರಗಳು ಆರ್ಥಿಕ ನೆರವು ನೀಡಬಾರದೆಂದು ಒತ್ತಾಯಿಸಿದ್ದರು. ಅಮೆರಿಕ ಆರ್ಥಿಕ ನೆರವು ನಿಲ್ಲಿಸಿದ್ದು ಪಾಕಿಸ್ತಾನ ಸರಕಾರ ಉಗ್ರರ ವಿಚಾರದಲ್ಲಿ ಗಟ್ಟಿ ನಿಲುವು ತಾಳುವಂತೆ ಮಾಡಿದೆ. ಆದರೆ, ಈ ನಿರ್ಬಂಧ ಎಷ್ಟರ ಮಟ್ಟಿಗೆ ಫಲದಾಯಕ ಎನ್ನೋದು ನೋಡಬೇಕಷ್ಟೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm