ಬ್ರೇಕಿಂಗ್ ನ್ಯೂಸ್
07-04-21 05:48 pm Headline Karnataka News Network ದೇಶ - ವಿದೇಶ
ಬ್ರೆಜಿಲ್,ಎ.7: ಜಗತ್ತಿನಾದ್ಯಂತ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಉಗ್ರ ಸ್ವರೂಪವನ್ನ ಪ್ರದರ್ಶಿಸುತ್ತಿದೆ. ಕೆಲವು ದೇಶಗಳಲ್ಲಿ ಕೊರೊನಾದ ಎರಡನೇ ಅಲೆ ಪ್ರಾರಂಭವಾಗಿದ್ದರೆ ಇನ್ನೂ ಕೆಲವು ದೇಶಗಳಲ್ಲಿ ಈಗಾಗಲೇ ಮೂರು ಮತ್ತು ನಾಲ್ಕನೇ ಕೊರೊನಾ ಅಲೆಗೆ ತತ್ತರಿಸುತ್ತಿವೆ. ಈ ಪೈಕಿ ಬ್ರೆಜಿಲ್ ಕೂಡ ಒಂದು.
ಬ್ರೆಜಿಲ್ನಲ್ಲಿ ಕಳೆದ 24 ಗಂಟೆಗಳಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬ್ರೆಜಿಲ್ನಲ್ಲಿ ಇಷ್ಟು ಮಂದಿ ಸೋಂಕಿನಿಂದ ಒಂದೇ ದಿನಕ್ಕೆ ಸಾವನ್ನಪ್ಪಿರುವುದು ಇದೇ ಮೊದಲು. ಈ ಮೂಲಕ ಈವರೆಗೆ ಬ್ರೆಜಿಲ್ನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,37,364ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಹೆಚ್ಚು ಜನರು ಬಲಿಯಾದ ದೇಶಗಳ ಪೈಕಿ ಬ್ರೆಜಿಲ್ ಈಗ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಯುನೈಟೆಡ್ ಸ್ಟೇಟ್ಸ್ ಇದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬ್ರೆಜಿಲ್ನ ಎಪಿಡೆಮಿಯೊಲೊಜಿಸ್ಟ್ ಎಥೆಲ್ ಮೆಸಿಯೆಲ್.. ನಮ್ಮಿಂದ ದೇಶದ 10 ಪರ್ಸೆಂಟ್ ಜನರಿಗಷ್ಟೇ ಈವರೆಗೆ ವ್ಯಾಕ್ಸಿನ್ ನೀಡಲಾಗಿದೆ. ಇಷ್ಟು ವೇಗವಾಗಿ ಹರಡುತ್ತಿರುವ ಸೋಂಕನ್ನು ತಡೆಹಿಡಿಯಲು ಇರುವ ಏಕೈಕ ಮಾರ್ಗ ಕನಿಷ್ಟ 20 ದಿನಗಳ ಕಾಲ ಲಾಕ್ಡೌನ್ ಮಾಡುವುದು ಎಂದು ಹೇಳಿದ್ದಾರೆ.

ಅಲ್ಲದೇ ದುರಾದೃಷ್ಟಕರ ವಿಚಾರ ಎಂದರೆ ಇಲ್ಲಿನ ರಾಜಕೀಯ ನಮ್ಮನ್ನು ಇಂದು ಈ ಸ್ಥಿತಿಗೆ ತಂದು ನಿಲ್ಲಿಸಿದೆ. ಇಷ್ಟೊಂದು ಮಂದಿ ಸಾವನ್ನಪ್ಪಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಮರುಗಿದ್ದಾರೆ. ವರ್ಲ್ಡ್ಡೋಮೀಟರ್ ಪ್ರಕಾರ ಜಗತ್ತಿನಾದ್ಯಂತ ಅತಿಹೆಚ್ಚು ಸೋಂಕಿತರನ್ನ ಹೊಂದಿದ ದೇಶಗಳ ಪಟ್ಟಿಯಲ್ಲೂ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಇಲ್ಲಿವರೆಗೆ ಬ್ರೆಜಿಲ್ನಲ್ಲಿ 1,31,06,058 ಜನರು ಸೋಂಕಿಗೊಳಗಾಗಿದ್ದಾರೆ. ಸೋಂಕಿನಿಂದ 3,37,364 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 1,15,58,784 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ ಸಕ್ರಿಯ ಸೋಂಕಿತರ ಸಂಖ್ಯೆ 12,09,910 ಕ್ಕೆ ಏರಿದೆ.
For the first time since the start of the COVID-19 pandemic, Brazil has recorded more than 4,000 coronavirus deaths in a single day, a new grim milestone for the country as President Jair Bolsonaro continues to reject public health restrictions
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm