ಬ್ರೇಕಿಂಗ್ ನ್ಯೂಸ್
09-04-21 12:27 pm Headline Karnataka News Network ದೇಶ - ವಿದೇಶ
ದೆಹಲಿ,ಎ.9: ಭಾರತದಲ್ಲಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಗಗನಮುಖಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1,31,968 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ದೇಶದ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 9,79,608ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಕೊರೊನಾ ಸೋಂಕಿತರು ನಾಲ್ಕನೇ ಬಾರಿ ಪತ್ತೆಯಾದಂತಾಗಿದೆ. ಈ ಮೂಲಕ ದೇಶದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,060,542ಕ್ಕೇರಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,19,13,292 ಜನರು ಗುಣಮುಖರಾಗಿದ್ದಾರೆ. ಈವರೆಗೆ ದೇಶದ 9,43,34,262 ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗಿದೆ. ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಕಡಿಮೆಯಿಲ್ಲ. ಕಳೆದ 24 ಗಂಟೆಗಳಲ್ಲಿ ಒಟ್ಟು 780 ಜನರು ಮೃತಪಟ್ಟಿದ್ದಾರೆ. ಅಲ್ಲದೇ, ಕಳೆದ 24 ಗಂಟೆಗಳಲ್ಲಿ 13,64,205 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಮೊನ್ನೆಗಿಂತ ಲಕ್ಷಕ್ಕೂ ಹೆಚ್ಚು ಜನರಿಗೆ ನಿನ್ನೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪತ್ತೆಯಾಗುತ್ತಿರುವ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಎರಡನೆ ಸ್ಥಾನವನ್ನು ಛತ್ತೀಸಗಡ ಪಡೆದುಕೊಂಡಿದೆ. ಅಲ್ಲದೇ ದೇಶದ ವಿವಿಧ ರಾಜ್ಯಗಳ ವಿವಿಧ ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
India reported 1,31,968 Covid-19 cases and 780 deaths in the 24 hours ending 9 am Friday. The country’s caseload includes 9,79,608 active cases and 1,19,13,292 recoveries and 1,67,642 deaths, the Union Health Ministry said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm