ಬ್ರೇಕಿಂಗ್ ನ್ಯೂಸ್
13-04-21 10:41 am Headline Karnataka News Network ದೇಶ - ವಿದೇಶ
ಮಂಗಳೂರು, ಎ.13: ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ತಡರಾತ್ರಿಯಲ್ಲಿ ನೇರವಾಗಿ ಕೊಚ್ಚಿಗೆ ತೆರಳಿದ್ದು ಅಲ್ಲಿ ಇಳಿದುಕೊಂಡ ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ.

ರಾತ್ರಿ 12.30 ಕ್ಕೆ ವಿಮಾನ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಮಂಗಳೂರಿನಲ್ಲಿ ಭಾರೀ ಸಿಡಿಲು ಮಳೆಯಾಗಿದ್ದರಿಂದ ವಿಮಾನವನ್ನು ಇಳಿಸಲಾಗದೆ ನೇರವಾಗಿ ಕೇರಳದ ಕೊಚ್ಚಿಗೆ ತೆರಳಿತ್ತು. ರಾತ್ರಿ ಒಂದು ಗಂಟೆ ಸುಮಾರಿಗೆ ಕೊಚ್ಚಿ ತಲುಪಿದ್ದ ವಿಮಾನದಲ್ಲಿ ಸುಮಾರು 118 ಮಂದಿ ಪ್ರಯಾಣಿಕರಿದ್ದರು. ಆನಂತರ ಅರ್ಧ ಗಂಟೆಯಲ್ಲಿ ಮತ್ತೆ ವಿಮಾನವನ್ನು ಮಂಗಳೂರಿಗೆ ಹಿಂತಿರುಗಿ ಓಡಿಸಲಾಗುತ್ತದೆ ಎಂದು ಹೇಳಿ ಪ್ರಯಾಣಿಕರನ್ನು ವಿಮಾನದಲ್ಲೇ ಕುಳ್ಳಿರಿಸಲಾಗಿತ್ತು.

ಆದರೆ ಎರಡು ಗಂಟೆ ಕಳೆದರೂ ವಿಮಾನ ಹೊರಡಲಿಲ್ಲ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಏರ್ಪೋರ್ಟ್ ಟರ್ಮಿನಲ್ ಗೆ ಕರೆದೊಯ್ಯಲಾಯಿತು. ಅಲ್ಲಿ ಮಕ್ಕಳು, ಕುಟುಂಬಸ್ಥರು ಎಲ್ಲರನ್ನೂ ಒಂದೇ ಕಡೆ ಕೂಡಿಹಾಕಿದ್ದರು. ಕುಳಿತುಕೊಳ್ಳುವುದಕ್ಕೂ ವ್ಯವಸ್ಥೆ ಇರಲಿಲ್ಲ. ಅಲ್ಲದೆ, ನೀರು ಕೊಡುವ ವ್ಯವಸ್ಥೆಯನ್ನೂ ಮಾಡಲಿಲ್ಲ. ನಾವು ಇಲ್ಲಿಂದಲೇ ರಸ್ತೆ ದಾರಿಯಾಗಿ ಹೋಗುತ್ತೇವೆ ಎಂದು ಗೋಗರೆದರೂ ಅಲ್ಲಿನ ಅಧಿಕಾರಿಗಳು ಹೊರಗೆ ಬಿಡಲಿಲ್ಲ. ಬೆಳಗ್ಗೆ 9.30 ರ ವರೆಗೂ ನಾವು ಇಲ್ಲೇ ಇದ್ದೇವೆ. ಚಹಾ, ನೀರು, ಯಾವುದೂ ಇಲ್ಲದೆ ಮಕ್ಕಳು, ತಾಯಂದಿರು ಸಂಕಟ ಪಟ್ಟಿದ್ದಾರೆ ಎಂದು ಮಡಿಕೇರಿ ಮೂಲದ ಪ್ರಯಾಣಿಕ ಅಬು ತಾಹಿರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ರಾತ್ರಿ ಒಂದು ವಿಮಾನ ಇಳಿಸಿ ಹೋದ ಪೈಲಟ್ ಮತ್ತೆ ಬಂದಿರಲಿಲ್ಲ. ಈಗ ಬೆಳಗ್ಗೆ 9.30 ಕ್ಕೆ ಅದೇ ಪೈಲಟ್ ಬಂದಿದ್ದಾರೆ. ನಮ್ಮನ್ನು ಯಾಕೆ ಸತಾಯಿಸಿದ್ದಾರೆ ಏರ್ ಇಂಡಿಯಾ ಅಧಿಕಾರಿಗಳು. ನಾವು ಇಳಿದು ಹೋಗುತ್ತಿದ್ದರೂ, ಈಗ ಮಂಗಳೂರು ತಲುಪುತ್ತಿದ್ದೆವು. ತುಂಬ ಅರ್ಜೆಂಟಲ್ಲಿ ಬಂದವರಿದ್ದರು. ಬಜ್ಪೆ ಬಳಿಯ ಒಬ್ಬರು ತಂದೆ ತೀರಿಕೊಂಡಿದ್ದರೆಂದು ಅರ್ಜೆಂಟಾಗಿ ಬಂದಿದ್ದರು. ಇವರನ್ನೆಲ್ಲ ಏರ್ ಇಂಡಿಯಾ ಅಧಿಕಾರಿಗಳು ಸತಾಯಿಸಿದ್ದಾರೆ ಎಂದು ಹೇಳಿದರು ತಾಹಿರ್.

ಇವರಿಗೆ ಕಣ್ಣೂರು ಅಥವಾ ಕೋಯಿಕ್ಕೋಡ್ ಏರ್ಪೋರ್ಟ್ ನಲ್ಲಿ ಇಳಿಸಬಹುದಿತ್ತು. ಕೊಚ್ಚಿಗೆ ಒಯ್ದು ಲ್ಯಾಂಡ್ ಮಾಡಿದ್ದಾರೆ.
ಈಗ ಹತ್ತು ಗಂಟೆ ವೇಳೆಗೆ ವಿಮಾನ ಮತ್ತೆ ಮಂಗಳೂರಿಗೆ ಹೊರಡಲಿದೆ ಎನ್ನುತ್ತಿದ್ದಾರೆ. ನಾವು ಮತ್ತೆ ವಿಮಾನದಲ್ಲಿ ಕುಳಿತಿದ್ದೇವೆ. ಇನ್ನೂ ಟೇಕ್ ಆಫ್ ಆಗಿಲ್ಲ ಎಂದು ಬೆಳಗ್ಗೆ 10 ಗಂಟೆ ಸುಮಾರಿಗೆ ತಾಹಿರ್ ಕರೆ ಮಾಡಿ ಅಲವತ್ತುಕೊಂಡರು.
Dubai flight air India that was supposed to land in Mangalore has ended up landing in Cochi International airport due to heavy rains, thunderstorms and lightening causing trouble for passengers whole night.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm