ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm