ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm