ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm