ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm