ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.

ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm