ಬ್ರೇಕಿಂಗ್ ನ್ಯೂಸ್
15-04-21 05:27 pm Headline Karnataka News Network ದೇಶ - ವಿದೇಶ
ನವದೆಹಲಿ, ಏ.15 : ಕಳೆದ ವರ್ಷ ಕೋವಿಡ್ 19 ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅನಾರೋಗ್ಯದ ಕಾರಣದಿಂದ ತಿಹಾರ್ ಜೈಲಿನಿಂದ ಪೆರೋಲ್ ಮೇಲೆ 6,740 ಮಂದಿ ವಿಚಾರಣಾಧೀನ ಕೈದಿಗಳು ಬಿಡುಗಡೆಗೊಂಡಿದ್ದು, ಇದರಲ್ಲಿ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದು, ಅವರ ಪತ್ತೆಗಾಗಿ ದೆಹಲಿ ಪೊಲೀಸರ ನೆರವು ಕೋರಲಾಗಿದೆ ಎಂದು ವರದಿ ತಿಳಿಸಿದೆ.
ಪೆರೋಲ್ ಮೇಲೆ ಆರೋಪಿಗಳು, ವಿಚಾರಣಾಧೀನ ಕೈದಿಗಳು ಹೊರ ಹೋಗಿದ್ದು, ಇವರು ಎಚ್ ಐವಿ, ಕ್ಯಾನ್ಸರ್, ಕಿಡ್ನಿ ಸಮಸ್ಯೆ, ಹೆಪಟೈಟೀಸ್ ಬಿ (ಸಿ), ಅಸ್ತಮಾ ಮತ್ತು ಟಿಬಿಯಂತಹ ಕಾಯಿಲೆಯಿಂದ ಬಳಲುತ್ತಿದ್ದರು. ದಕ್ಷಿಣ ಏಷ್ಯಾದ ಅತೀ ದೊಡ್ಡ ಜೈಲು ಸಂಕೀರ್ಣಗಳಲ್ಲಿ ಒಂದಾಗಿರುವ ತಿಹಾರ್ ಜೈಲಿನಲ್ಲಿ 10,026 ಕೈದಿಗಳನ್ನು ಇರಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ದೆಹಲಿಯ ತಿಹಾರ್, ಮಾಂಡೋಲಿ ಮತ್ತು ರೋಹಿಣಿ ಜೈಲುಗಳಿಂದ 1,184 ಆರೋಪಿಗಳನ್ನು ಕೋವಿಡ್ ಪೆರೋಲ್ ಮೇಲೆ ಬಿಡುಗಡೆಗೊಳಿಸಲಾಗಿತ್ತು. ಆರಂಭಿಕ ಎಂಟು ವಾರಗಳ ಗಡುವಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ನಂತರ ಸಮಯಕ್ಕೆ ತಕ್ಕಂತೆ ಅವಧಿಯನ್ನು ಮುಂದುವರಿಸಲಾಗಿತ್ತು ಎಂದು ಜೈಲಿನ ಮೂಲಗಳು ವಿವರಿಸಿದೆ.

ಪೆರೋಲ್ ಮೇಲೆ ಹೋದ ಕೈದಿಗಳು ಫೆಬ್ರುವರಿ 7 ಮತ್ತು ಮಾರ್ಚ್ 6ರ ನಡುವೆ ಶರಣಾಗಬೇಕಿತ್ತು. ಆದರೆ 1,184 ಕೈದಿಗಳ ಪೈಕಿ 112 ಕೈದಿಗಳು ನಾಪತ್ತೆಯಾಗಿದ್ದಾರೆ. ಜೈಲಿನ ಅಧಿಕಾರಿಗಳು ಆರೋಪಿತರ ಕುಟುಂಬದ ಸದಸ್ಯರನ್ನು ಭೇಟಿಯಾದಾಗ, ಕೈದಿಗಳು ಮನೆಯಲ್ಲಿ ಇಲ್ಲ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ 5,556 ವಿಚಾರಣಾಧೀನ ಕೈದಿಗಳ ಪೈಕಿ ಕೇವಲ 2,200 ಕೈದಿಗಳು ಮಾತ್ರ ವಾಪಸ್ ಆಗಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. 2021ರ ಮಾರ್ಚ್ 6ರಂದು ಕೈದಿಗಳು ಶರಣಾಗುವ ಪ್ರಕ್ರಿಯೆ ಆರಂಭಿಸಲಾಗಿತ್ತು, ಆದರೆ ಈವರೆಗೆ 3,468 ಕೈದಿಗಳು ನಾಪತ್ತೆಯಾಗಿರುವುದಾಗಿ ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
Of the 6,740 prisoners at Tihar Jail who were released on parole last year in the wake of the Covid-19 pandemic, 3,468 have gone “missing”. Jail authorities have now approached the Delhi Police to help trace them.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm