ಬ್ರೇಕಿಂಗ್ ನ್ಯೂಸ್
15-04-21 10:15 pm Headline Karnataka News Network ದೇಶ - ವಿದೇಶ
ಮುಂಬೈ, ಎ 15: ಅಮೆರಿಕದ ಬ್ಯಾಂಕಿಂಗ್ ಕಂಪನಿಯಾದ ‘ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಪ್ರಕಟಿಸಿದೆ. ಸಿಟಿ ಬ್ಯಾಂಕ್ ಭಾರತದಲ್ಲಿ ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದೆ. ಸರಿಸುಮಾರು ನಾಲ್ಕು ಸಾವಿರ ನೌಕರರು ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒಟ್ಟು 13 ದೇಶಗಳಲ್ಲಿ ಸ್ಥಗಿತಗೊಳಿಸುವ ತೀರ್ಮಾನವನ್ನು ಸಿಟಿಬ್ಯಾಂಕ್ ಕಂಪನಿ ಗುರುವಾರ ಪ್ರಕಟಿಸಿತು. ‘ಈ ದೇಶಗಳಲ್ಲಿ ನಾವು ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಬೃಹತ್ ಆಗಿ ಬೆಳೆದಿಲ್ಲ’ ಎಂಬ ಕಾರಣಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಿಟಿಬ್ಯಾಂಕ್ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಹೇಳಿದ್ದಾರೆ.

ಸಿಟಿಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯ. ‘ನಮ್ಮ ಚಟುವಟಿಕೆಗಳಲ್ಲಿ ತಕ್ಷಣಕ್ಕೆ ಯಾವುದೇ ಬದಲಾವಣೆ ಇಲ್ಲ. ಈಗ ಮಾಡಿರುವ ಘೋಷಣೆಯಿಂದಾಗಿ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನಾವು ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ’ ಎಂದು ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಹೇಳಿದ್ದಾರೆ.
ಸಿಟಿ ಬ್ಯಾಂಕ್ 1985ರಿಂದ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಕಂಪನಿ ಮುಂದುವರಿಸಲಿದೆ.
American banking major Citibank on Thursday announced that it will exit from the consumer banking business in India as part of a global strategy. The business comprises credit cards, retail banking, home loans and wealth management.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm