ಬ್ರೇಕಿಂಗ್ ನ್ಯೂಸ್
15-04-21 10:15 pm Headline Karnataka News Network ದೇಶ - ವಿದೇಶ
ಮುಂಬೈ, ಎ 15: ಅಮೆರಿಕದ ಬ್ಯಾಂಕಿಂಗ್ ಕಂಪನಿಯಾದ ‘ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಪ್ರಕಟಿಸಿದೆ. ಸಿಟಿ ಬ್ಯಾಂಕ್ ಭಾರತದಲ್ಲಿ ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದೆ. ಸರಿಸುಮಾರು ನಾಲ್ಕು ಸಾವಿರ ನೌಕರರು ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒಟ್ಟು 13 ದೇಶಗಳಲ್ಲಿ ಸ್ಥಗಿತಗೊಳಿಸುವ ತೀರ್ಮಾನವನ್ನು ಸಿಟಿಬ್ಯಾಂಕ್ ಕಂಪನಿ ಗುರುವಾರ ಪ್ರಕಟಿಸಿತು. ‘ಈ ದೇಶಗಳಲ್ಲಿ ನಾವು ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಬೃಹತ್ ಆಗಿ ಬೆಳೆದಿಲ್ಲ’ ಎಂಬ ಕಾರಣಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಿಟಿಬ್ಯಾಂಕ್ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಹೇಳಿದ್ದಾರೆ.
ಸಿಟಿಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯ. ‘ನಮ್ಮ ಚಟುವಟಿಕೆಗಳಲ್ಲಿ ತಕ್ಷಣಕ್ಕೆ ಯಾವುದೇ ಬದಲಾವಣೆ ಇಲ್ಲ. ಈಗ ಮಾಡಿರುವ ಘೋಷಣೆಯಿಂದಾಗಿ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನಾವು ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ’ ಎಂದು ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಹೇಳಿದ್ದಾರೆ.
ಸಿಟಿ ಬ್ಯಾಂಕ್ 1985ರಿಂದ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಕಂಪನಿ ಮುಂದುವರಿಸಲಿದೆ.
American banking major Citibank on Thursday announced that it will exit from the consumer banking business in India as part of a global strategy. The business comprises credit cards, retail banking, home loans and wealth management.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm