ಬ್ರೇಕಿಂಗ್ ನ್ಯೂಸ್
17-04-21 12:52 pm Headline Karnataka News Network ದೇಶ - ವಿದೇಶ
ಹರಿದ್ವಾರ, ಏಪ್ರಿಲ್ 17: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದ ಹಲವು ಸಾಧುಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕುಂಭಮೇಳ ಈಗ ಸಾಂಕೇತಿಕವಾಗಿರಬೇಕಿದೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಸ್ವಾಮಿ ಅವದೇಶಾನಂದ ಗಿರಿ ಅವರೊಂದಿಗೆ ಮಾತನಾಡಿದ ನಂತರ ಮೋದಿ ಟ್ವೀಟ್ ಮಾಡಿದ್ದಾರೆ. ಶುಕ್ರವಾರ ಕುಂಭಮೇಳದಲ್ಲಿ ಭಾಗವಹಿಸಿದ್ದ 30 ಸಾಧುಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಮಹಾಮಂಡಲೇಶ್ವರ (ಮುಖ್ಯ ಸಾಧುಗಳು) ಸೋಂಕಿನಿಂದಾಗಿ ಮೃತಪಟ್ಟಿದ್ದರು.
ಕುಂಭಮೇಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, "ಫೋನ್ ನಲ್ಲಿ ಸ್ವಾಮಿ ಅವದೇಶಾನಂದ ಗಿರಿ ಜೀ ಅವರೊಂದಿಗೆ ಮಾತನಾಡಿದೆ. ಎಲ್ಲಾ ಸಾಧುಗಳ ಆರೋಗ್ಯದ ಕುರಿತು ವಿಚಾರಿಸಿದ್ದೇನೆ. ಸಾಧುಗಳ ಆರೋಗ್ಯ ಸುಧಾರಣೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದು ಹೇಳಿದ್ದಾರೆ. ಸದ್ಯಕ್ಕೆ ಕುಂಭಮೇಳದಲ್ಲಿ ಎರಡು ಪವಿತ್ರ ಸ್ನಾನಗಳು ಸಂಪನ್ನವಾಗಿವೆ. ಇದೀಗ ದೇಶದಲ್ಲಿ ಕೊರೊನಾ ಸೋಂಕು ಮಿತಿ ಮೀರುತ್ತಿರುವುದರಿಂದ ಹಾಗೂ ಕುಂಭಮೇಳದಲ್ಲಿಯೂ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಕುಂಭಮೇಳವನ್ನು ಸಾಂಕೇತಿಕವಾಗಿ ನಡೆಸಬೇಕೆಂದು ಎಲ್ಲರಲ್ಲಿಯೂ ಮನವಿ ಮಾಡುತ್ತಿದ್ದೇನೆ. ಇದು ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬಲ ನೀಡಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮಾಡಿದ ನಂತರ ಕುಂಭಮೇಳಕ್ಕೆ ಬರದಂತೆ ಅವದೇಶಾನಂದ ಸ್ವಾಮೀಜಿ ಕೂಡ ಮನವಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪವಿತ್ರ ಸ್ನಾನದಲ್ಲಿ ಭಾಗವಹಿಸದಂತೆ ಕೇಳಿಕೊಂಡಿದ್ದಾರೆ.
ಕುಂಭಮೇಳ ಆರಂಭವಾದ ನಂತರ ವಾರದಲ್ಲಿ ಹರಿದ್ವಾರದಲ್ಲಿ ಸುಮಾರು 2000 ಕೊರೊನಾ ಪ್ರಕರಣಗಳು ದಾಖಲಾಗಿವೆ. ಪವಿತ್ರ ಸ್ನಾನದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಭಕ್ತಾದಿಗಳು ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವುದೂ ಕಂಡುಬಂದಿದೆ.
ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !
ಕರ್ನಾಟಕದಿಂದ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ; ಆರೋಗ್ಯ ಸಚಿವ ಡಾ.ಸುಧಾಕರ್
मैंने प्रार्थना की है कि दो शाही स्नान हो चुके हैं और अब कुंभ को कोरोना के संकट के चलते प्रतीकात्मक ही रखा जाए। इससे इस संकट से लड़ाई को एक ताकत मिलेगी। @AvdheshanandG
— Narendra Modi (@narendramodi) April 17, 2021
As COVID-19 cases in the country topped over 2.3 lakh cases on Saturday, Prime Minister Narendra Modi sought a curtailment of the Kumbh Mela underway in Haridwar, suggesting to ‘akharas’ (congregations of Hindu seers) that the event be concluded with symbolic rituals.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm