ಬ್ರೇಕಿಂಗ್ ನ್ಯೂಸ್
17-04-21 09:53 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.17: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ನಗರ ಪ್ರದೇಶಗಳಲ್ಲಿ ಹೊಸ ರೀತಿಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನಗರ ಪ್ರದೇಶಗಳಿಗೆ ಬರುವ ಮಂದಿ ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಅಥವಾ ಕೋವಿಡ್ ಲಸಿಕೆಯನ್ನು ಹಾಕಿಸಿರಬೇಕು ಎಂಬ ನಿಯಮ ಜಾರಿಗೆ ತರುತ್ತಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ನಗರ, ಕುಂಬಳೆ, ಉಪ್ಪಳ, ಕಾಞಂಗಾಡ್, ಚೆರುವತ್ತೂರು, ನೀಲೇಶ್ವರ ನಗರಗಳಲ್ಲಿ ಈ ಹೊಸ ನಿಯಮ ಎ.24ರಿಂದ ಜಾರಿಗೆ ಬರಲಿದೆ. ಜನರು ಮಾರ್ಕೆಟ್, ಶಾಪಿಂಗ್ ಇನ್ನಿತರ ಕಾರಣಕ್ಕೆ ಎಲ್ಲೆಂದರಲ್ಲಿ ಸಂಚರಿಸುವುದು, ಸೇರುವುದನ್ನು ತಪ್ಪಿಸಲು ಜಿಲ್ಲಾಡಳಿತ ಈ ರೀತಿಯ ಕಾನೂನು ಜಾರಿಗೆ ತರಲು ನಿರ್ಧರಿಸಿದೆ.
ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ನೇತೃತ್ವದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಜನರಿಗೆ ಅರಿವು ಮೂಡಿಸುವುದಕ್ಕಾಗಿ ಹೊಸ ನಿಯಮವನ್ನು ತಕ್ಷಣಕ್ಕೆ ಜಾರಿಗೆ ತರದೆ ಒಂದು ವಾರ ಕಾಲ ಸಮಯ ಕೊಡಲಾಗಿದೆ. ಅಷ್ಟರಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು ಅಥವಾ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಬೇಕು ಎಂದು ಸೂಚನೆ ನೀಡಲಾಗಿದೆ.
ಎ.24 ರ ಬೆಳಗ್ಗೆ 8ರಿಂದ ಹೊಸ ನೀತಿ ಜಾರಿಗೆ ಬರಲಿದ್ದು ಅಲ್ಲಲ್ಲಿ ಪೊಲೀಸರು ಪೆಟ್ರೋಲಿಂಗ್ ನಡೆಸಲಿದ್ದಾರೆ. ತಪಾಸಣೆ ನಡೆಸಲಿದ್ದು, ಲಸಿಕೆ ಹಾಕಿಸಿಕೊಂಡಿದ್ದಕ್ಕೆ ದೃಢಪತ್ರ ಇಲ್ಲದಿದ್ದಲ್ಲಿ ಹಿಂದಕ್ಕೆ ಕಳುಹಿಸಲಿದ್ದಾರೆ.
ಇದೇ ಸೋಮವಾರದಿಂದಲೇ ಹೊಸ ನೀತಿ ಜಾರಿಗೆ ತರುವ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಿತ್ತು. ಆದರೆ, ಜನರಿಗೆ ಹೊಸ ನೀತಿಯ ಬಗ್ಗೆ ಅರಿವು ಮೂಡಿಸದೆ ಅದನ್ನು ಹೇರಬಾರದು ಎಂಬ ನೆಲೆಯಲ್ಲಿ ಆಡಳಿತಾತ್ಮಕ ಕಾರಣಕ್ಕೆ ಮುಂದಿನ ಶನಿವಾರದಿಂದ ಹೊಸ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈಗ ನಿಷೇಧ ಜಾರಿಗೆ ತಂದಿರುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಜೊತೆಗೆ ಕೋವಿಡ್ ಲಸಿಕೆ ನೀಡಲು ಕ್ರಮ ಮತ್ತು ಸ್ಥಳದಲ್ಲೇ ಪರೀಕ್ಷೆ ನಡೆಸುವುದಕ್ಕೂ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
The Kasaragod district administration has imposed restrictions on people entering the town in the wake of surging Covid cases in the state. A Covid negative certificate or full vaccination certificate is needed for people to enter Kasaragod, Kanhangad, Neeleshwaram, Cheruvathur, Uppala and Kumbala towns. District collector Dr D Sajithbabu informed that the restriction will come into effect from Saturday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm