ಬ್ರೇಕಿಂಗ್ ನ್ಯೂಸ್
17-04-21 09:53 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.17: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ನಗರ ಪ್ರದೇಶಗಳಲ್ಲಿ ಹೊಸ ರೀತಿಯ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನಗರ ಪ್ರದೇಶಗಳಿಗೆ ಬರುವ ಮಂದಿ ಕಡ್ಡಾಯ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಅಥವಾ ಕೋವಿಡ್ ಲಸಿಕೆಯನ್ನು ಹಾಕಿಸಿರಬೇಕು ಎಂಬ ನಿಯಮ ಜಾರಿಗೆ ತರುತ್ತಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ನಗರ, ಕುಂಬಳೆ, ಉಪ್ಪಳ, ಕಾಞಂಗಾಡ್, ಚೆರುವತ್ತೂರು, ನೀಲೇಶ್ವರ ನಗರಗಳಲ್ಲಿ ಈ ಹೊಸ ನಿಯಮ ಎ.24ರಿಂದ ಜಾರಿಗೆ ಬರಲಿದೆ. ಜನರು ಮಾರ್ಕೆಟ್, ಶಾಪಿಂಗ್ ಇನ್ನಿತರ ಕಾರಣಕ್ಕೆ ಎಲ್ಲೆಂದರಲ್ಲಿ ಸಂಚರಿಸುವುದು, ಸೇರುವುದನ್ನು ತಪ್ಪಿಸಲು ಜಿಲ್ಲಾಡಳಿತ ಈ ರೀತಿಯ ಕಾನೂನು ಜಾರಿಗೆ ತರಲು ನಿರ್ಧರಿಸಿದೆ.

ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ನೇತೃತ್ವದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಜನರಿಗೆ ಅರಿವು ಮೂಡಿಸುವುದಕ್ಕಾಗಿ ಹೊಸ ನಿಯಮವನ್ನು ತಕ್ಷಣಕ್ಕೆ ಜಾರಿಗೆ ತರದೆ ಒಂದು ವಾರ ಕಾಲ ಸಮಯ ಕೊಡಲಾಗಿದೆ. ಅಷ್ಟರಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು ಅಥವಾ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಬೇಕು ಎಂದು ಸೂಚನೆ ನೀಡಲಾಗಿದೆ.

ಎ.24 ರ ಬೆಳಗ್ಗೆ 8ರಿಂದ ಹೊಸ ನೀತಿ ಜಾರಿಗೆ ಬರಲಿದ್ದು ಅಲ್ಲಲ್ಲಿ ಪೊಲೀಸರು ಪೆಟ್ರೋಲಿಂಗ್ ನಡೆಸಲಿದ್ದಾರೆ. ತಪಾಸಣೆ ನಡೆಸಲಿದ್ದು, ಲಸಿಕೆ ಹಾಕಿಸಿಕೊಂಡಿದ್ದಕ್ಕೆ ದೃಢಪತ್ರ ಇಲ್ಲದಿದ್ದಲ್ಲಿ ಹಿಂದಕ್ಕೆ ಕಳುಹಿಸಲಿದ್ದಾರೆ.

ಇದೇ ಸೋಮವಾರದಿಂದಲೇ ಹೊಸ ನೀತಿ ಜಾರಿಗೆ ತರುವ ಬಗ್ಗೆ ಜಿಲ್ಲಾಡಳಿತ ನಿರ್ಧರಿಸಿತ್ತು. ಆದರೆ, ಜನರಿಗೆ ಹೊಸ ನೀತಿಯ ಬಗ್ಗೆ ಅರಿವು ಮೂಡಿಸದೆ ಅದನ್ನು ಹೇರಬಾರದು ಎಂಬ ನೆಲೆಯಲ್ಲಿ ಆಡಳಿತಾತ್ಮಕ ಕಾರಣಕ್ಕೆ ಮುಂದಿನ ಶನಿವಾರದಿಂದ ಹೊಸ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈಗ ನಿಷೇಧ ಜಾರಿಗೆ ತಂದಿರುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಜೊತೆಗೆ ಕೋವಿಡ್ ಲಸಿಕೆ ನೀಡಲು ಕ್ರಮ ಮತ್ತು ಸ್ಥಳದಲ್ಲೇ ಪರೀಕ್ಷೆ ನಡೆಸುವುದಕ್ಕೂ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.
The Kasaragod district administration has imposed restrictions on people entering the town in the wake of surging Covid cases in the state. A Covid negative certificate or full vaccination certificate is needed for people to enter Kasaragod, Kanhangad, Neeleshwaram, Cheruvathur, Uppala and Kumbala towns. District collector Dr D Sajithbabu informed that the restriction will come into effect from Saturday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm