ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm