ಬ್ರೇಕಿಂಗ್ ನ್ಯೂಸ್
19-04-21 08:36 pm Headline Karnataka News Network ದೇಶ - ವಿದೇಶ
ದೆಹಲಿ, ಎ 19: ಕೊರೊನಾವೈರಸ್ ಎರಡನೇ ಅಲೆಯಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹೊತ್ತಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.
ಮೇ 1ರಿಂದ ಎಲ್ಲರಿಗೂ ಕೊವಿಡ್ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರವಿದೆ, ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರಿಗೆ ಲಸಿಕೆ ನೀಡಬಹುದು. ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ 50ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಪೂರ್ವ ಘೋಷಿತ ಬೆಲೆಗೆ ಬಿಡುಗಡೆ ಮಾಡಬಹುದಾಗಿದೆ ಎಂದು ಸರ್ಕಾರ ಹೇಳಿದೆ.

ಭಾರತ ಸರ್ಕಾರವು ತನ್ನ ಪಾಲಿನಿಂದ, ಸೋಂಕಿನ ವ್ಯಾಪ್ತಿ (ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ) ಮತ್ತು ಕಾರ್ಯಕ್ಷಮತೆ (ಆಡಳಿತದ ವೇಗ) ದ ಆಧಾರದ ಮೇಲೆ ಲಸಿಕೆಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಿದೆ. ಆರೋಗ್ಯ ಮತ್ತು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರು, 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ನೀಡಲಾಗುವುದು.

ವಿಶ್ವದ ಅತಿದೊಡ್ಡ ಲಸಿಕೆ ವಿತರಣೆ ಅಭಿಯಾನದ 3 ನೇ ಹಂತದಲ್ಲಿ ಖರೀದಿ, ಅರ್ಹತೆ, ಲಸಿಕೆಗಳ ನಿರ್ವಹಣೆಯನ್ನು ಸುಲಭವಾಗಿ ಮಾಡಲಾಗುತ್ತಿದೆ. ಲಸಿಕೆ ಬೆಲೆಯ ಆಧಾರದ ಮೇಲೆ, ರಾಜ್ಯ ಸರ್ಕಾರಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳು ಇತ್ಯಾದಿ ಉತ್ಪಾದಕರಿಂದ ಲಸಿಕೆ ಪ್ರಮಾಣವನ್ನು ಸಂಗ್ರಹಿಸಬಹುದು. ಖಾಸಗಿ ವ್ಯಾಕ್ಸಿನೇಷನ್ ಪೂರೈಕೆದಾರರು ತಮ್ಮ ಲಸಿಕೆಯ ಬೆಲೆಯನ್ನು ಪಾರದರ್ಶಕವಾಗಿ ಘೋಷಿಸಬೇಕು ಎಂದು ಸರ್ಕಾರ ಹೇಳಿದೆ.

ದೇಶದಲ್ಲಿ ಕಳೆದ 24ಗಂಟೆಯಲ್ಲಿ 2,73,810ಹೊಸ ಕೊರೊನಾ ಕೇಸ್ಗಳು ದಾಖಲಾಗಿದ್ದು, 1,619 ಜನರು ಮೃತಪಟ್ಟಿದ್ದಾರೆ. ಹಾಗೇ 1,44,178 ಜನರು ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ. ಅಲ್ಲಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 19,29,329. ಒಟ್ಟು ಚೇತರಿಕೆ ಕಂಡವರ ಸಂಖ್ಯೆ 1,29,53,821 ಮತ್ತು ಕೊರೊನಾದಿಂದ ಜೀವ ಕಳೆದುಕೊಂಡವರು 1,78,769 ಜನರು.
ಕೊರೊನಾ ಎರಡನೇ ಅಲೆಯಲ್ಲಿ ಹಿರಿಯ ನಾಗರಿಕರಿಗೆ ಹೋಲಿಸಿದರೆ ಯುವಜನರೇ ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಲಕ್ಷಣಗಳೂ ಸ್ವಲ್ಪ ವಿಭಿನ್ನವಾಗಿದ್ದು, ಬಾಯಿ ಒಣಗುವುದು, ಗ್ಯಾಸ್ಟ್ರಿಕ್, ಲೂಸ್ ಮೋಶನ್, ಕೆಂಪು ಕಣ್ಣು, ತಲೆನೋವುಗಳು ಕಾಣಿಸಿಕೊಳ್ಳುತ್ತಿವೆ. ಈ ಬಾರಿ ಕೊರೊನಾ ಪಾಸಿಟಿವ್ ಬಂದವರಿಗೆ ಎಲ್ಲರಿಗೂ ಜ್ವರ ಕಾಣಿಸಿಕೊಳ್ಳುತ್ತಿಲ್ಲ ಎಂದು ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥರಾದ ಗೌರಿ ಅಗರ್ವಾಲ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಚೇತರಿಕೆಯ ಪ್ರಮಾಣ 86.62ಕ್ಕೆ ಕುಸಿದಿದೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 18,01,316 ಇದ್ದು, ಒಟ್ಟು ಸೋಂಕಿತರ ಸಂಖ್ಯೆಯ ಶೇ.12.18ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದ್ದು ಆಗಸ್ಟ್ 7ರಂದು. 30 ಲಕ್ಷ ದಾಟಿದ್ದು ಆಗಸ್ಟ್ 23ರಂದು, 40 ಲಕ್ಷ ದಾಟಿದ್ದು ಸೆಪ್ಟೆಂಬರ್ 5 ಮತ್ತು 50 ಲಕ್ಷ ದಾಟಿದ್ದು ಸೆಪ್ಟೆಂಬ್ 16ರಂದು. ಕಳೆದ ಬಾರಿಗೆ ಹೋಲಿಸಿದರೆ ಸೋಂಕಿನ ಪ್ರಸರಣ ತುಂಬ ವೇಗವಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.
Vaccinations will be opened to all above 18 from May 1, the government announced today after Prime Minister Narendra Modi held a series of meetings over India's response to record daily surges in Covid cases.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm