ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am