ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm