ಬ್ರೇಕಿಂಗ್ ನ್ಯೂಸ್
21-04-21 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.21: ಬಾನಾಡಿಯಾಗಿ ಹಾರಿಹೋಗುವ ಪಾರಿವಾಳದ ವಿರುದ್ಧ ಎಫ್ಐಆರ್ ಆಗಿರುವುದನ್ನು ಕೇಳಿದ್ದೀರಾ.. ಸಾಮಾನ್ಯವಾಗಿ ಮನುಷ್ಯರು ಅಪರಾಧ ಕೃತ್ಯ ಎಸಗಿದರೆ ಅವರನ್ನು ಶಿಕ್ಷಿಸಲು ಕೇಸ್, ಎಫ್ಐಆರ್ ಮಾಡಲಾಗುತ್ತದೆ. ಆದರೆ, ಇಲ್ಲೊಂದು ಸಾಮಾನ್ಯ ಪಾರಿವಾಳದ ವಿರುದ್ಧವೇ ಪೊಲೀಸರು ಕೇಸ್ ಬುಕ್ ಮಾಡಿದ್ದಾರೆ.
ಹೌದು.. ಪಾಕಿಸ್ಥಾನದ ಗಡಿಭಾಗ ಪಂಜಾಬ್ ನಲ್ಲಿ ಪಾರಿವಾಳದ ವಿರುದ್ಧವೇ ಸ್ಥಳೀಯ ಪೊಲೀಸರು ಎಫ್ಐಆರ್ ರಿಜಿಸ್ಟರ್ ಮಾಡಿದ್ದಾರೆ. ಅಂತಾರಾಷ್ಟ್ರೀಯ ಗಡಿರೇಖೆಯಿಂದ 500 ಮೀಟರ್ ಒಳಭಾಗದಲ್ಲಿ ಹಾರಿಬಂದ ಪಾರಿವಾಳವನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ಅದರ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಎ.17ರಂದು ಸಂಜೆ ಗಡಿಭಾಗದಲ್ಲಿ ಕರ್ತವ್ಯದಲ್ಲಿದ್ದ ನೀರಜ್ ಕುಮಾರ್ ಎಂಬ ಯೋಧನ ಹೆಗಲಲ್ಲಿ ಕುಳಿತ ಪಾರಿವಾಳವನ್ನು ಆತ ಕೂಡಲೇ ಹಿಡಿದುಕೊಂಡಿದ್ದರು. ಕಾಲಿನಲ್ಲಿ ಸಿಕ್ಕಿಸಿಕೊಂಡಿದ್ದ ಕಾಗದ ಚೂರಿನಲ್ಲಿ ಏನೋ ಗೂಢ ಸಂಖ್ಯೆ ಇರುವುದನ್ನು ಗಮನಿಸಿದ ಯೋಧ ಕೂಡಲೇ, ತಮ್ಮ ವಿಭಾಗದ ಕಮಾಂಡರಿಗೆ ಸುದ್ದಿ ಮುಟ್ಟಿಸಿದರು. ಬಳಿಕ ಕಮಾಂಡರ್ ಓಂಪಾಲ್ ಸಿಂಗ್ ಸೂಚನೆಯಂತೆ, ಪಾರಿವಾಳವನ್ನು ವಶಕ್ಕೆ ಪಡೆದಿದ್ದು ಅದರಲ್ಲಿ ಕಾಲಿನಲ್ಲಿ ಸಿಕ್ಕಿಸಿಕೊಂಡಿದ್ದ ಕಾಗದದ ಚೂರನ್ನು ಗಮನಿಸಿದ್ದಾರೆ.

ಪಾರಿವಾಳದ ಕಾಲಿಗೆ ಗಮ್ ಟೇಪಲ್ಲಿ ಸುತ್ತಿಟ್ಟ ರೀತಿಯಲ್ಲಿ ಕಾಗದದ ಚೂರನ್ನು ಅಂಟಿಸಲಾಗಿತ್ತು. ಅದರಲ್ಲಿ ಏನೋ ಕೋಡ್ ನಂಬರ್ ಬರೆಯಲಾಗಿತ್ತು. ಹೀಗಾಗಿ ಇದೊಂದು ಗೂಢಚಾರಿಕೆ ಕೆಲಸಕ್ಕಾಗಿ ಹಾರಿಬಿಟ್ಟ ಪಾರಿವಾಳ ಎನ್ನುವುದನ್ನು ಅರಿತ ಕಮಾಂಡರ್ ಓಂಪಾಲ್ ಸಿಂಗ್, ಅದರ ವಿರುದ್ಧ ಸ್ಥಳೀಯ ಅಮೃತಸರ ಸಮೀಪದ ಕಹಾಗರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ ನಲ್ಲಿ ಬಿಳಿ ಬಣ್ಣದ ದೇಹ ಮತ್ತು ಕಪ್ಪು ಬಣ್ಣದ ತಲೆ ಹೊಂದಿರುವ ಪಾರಿವಾಳ ಮತ್ತು ಬಿಳಿ ಬಣ್ಣದ ಪೇಪರ್ ವಶಕ್ಕೆ ಪಡೆದಿರುವುದಾಗಿ ಉಲ್ಲೇಖ ಮಾಡಲಾಗಿದೆ.
ಕಳೆದ ವರ್ಷದ ಮೇ ತಿಂಗಳಲ್ಲಿಯೂ ಇದೇ ರೀತಿಯ ಗೂಢಚಾರಿಕೆ ವೃತ್ತಿಯ ಪಾರಿವಾಳ ಒಂದನ್ನು ಜಮ್ಮು ಗಡಿಭಾಗದಲ್ಲಿ ಯೋಧರು ಪತ್ತೆ ಮಾಡಿದ್ದರು. ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಗಡಿಭಾಗದಲ್ಲಿ ಗೂಢಚಾರಿಕೆಯ ತರಬೇತಾಗಿದ್ದ ಪಾರಿವಾಳವನ್ನು ವಶಕ್ಕೆ ಪಡೆಯಲಾಗಿತ್ತು. ಸೇನಾ ಮೂಲಗಳ ಪ್ರಕಾರ, ಪಾರಿವಾಳದ ಮೂಲಕ ಕೋಡೆಡ್ ಸಂದೇಶವನ್ನು ಕಳಿಸುತ್ತಿದ್ದು ಅದೆಲ್ಲೋ ದಾರಿತಪ್ಪಿ ಯೋಧರ ಕೈಗೆ ಸಿಕ್ಕಿದೆಯಂತೆ.
The auspicious pigeon was caught near the International Border at Punjab when the bird came flying near a constable who was on duty at BOP Roranwala. An FIR has been lodged against the pigeon which was carrying a piece of paper tied to its legs.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm