ಬ್ರೇಕಿಂಗ್ ನ್ಯೂಸ್
24-04-21 05:42 pm Headline Karnataka News Network ದೇಶ - ವಿದೇಶ
ಲಕ್ನೋ, ಎ.24: ಉತ್ತರ ಪ್ರದೇಶದಲ್ಲಿ ಕೋವಿಡ್ ಸೋಂಕು ಭಾರೀ ತೀವ್ರಗತಿಯಲ್ಲಿ ಹರಡುತ್ತಿದ್ದು, ಗಂಭೀರ ಪರಿಸ್ಥಿತಿ ಎದುರಾಗಿದೆ. ಲಕ್ನೋ ಮತ್ತು ಗಾಜಿಯಾಬಾದ್ ನಲ್ಲಿ ರೋಗಿಗಳಿಗೆ ಸಕಾಲದಲ್ಲಿ ಆಕ್ಸಿಜನ್ ಮತ್ತು ವೆಂಟಿಲೇಟರ್ ಸಿಗದೆ ಪರದಾಡುವ ಸ್ಥಿತಿ ಎದುರಾಗಿದೆ. ಇದೇ ವೇಳೆ, ಆಕ್ಸಿಜನ್ ಸಿಗದೆ ಬಳಲುವ ಮಂದಿಗಾಗಿ ಗಾಜಿಯಾಬಾದ್ ಸಿಖ್ ಗುರುದ್ವಾರ ಸಮಿತಿಯವರು ಉಚಿತವಾಗಿ ಆಕ್ಸಿಜನ್ ಪೂರೈಸುವ ಮುಂದಾಗಿದ್ದಾರೆ.

ಗಾಜಿಯಾಬಾದ್ ನಲ್ಲಿ ಆಸ್ಪತ್ರೆಗಳಿಗೆ ಅಲೆದಾಡುವುದಕ್ಕೂ ಮುನ್ನ ಗುರುದ್ವಾರ ಸಮಿತಿಯವರು ರಸ್ತೆ ಬದಿಗಳಲ್ಲೇ ಜನರಿಗೆ ಆಕ್ಸಿಜನ್ ಪೂರೈಸಲು ಆರಂಭಿಸಿದ್ದಾರೆ. ಆಧಾರ್ ಕಾರ್ಡ್ ಆಗಲೀ, ಕೋವಿಡ್ ಪಾಸಿಟಿವ್ ರಿಪೋರ್ಟ್ ಇಲ್ಲದೆಯೂ ಉಸಿರಾಟದ ಸಮಸ್ಯೆಯಿಂದ ನರಳುತ್ತಿರುವ ಮಂದಿಗೆ ರಸ್ತೆಯಲ್ಲೇ ಆಕ್ಸಿಜನ್ ಪೂರೈಸುತ್ತಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದ ಇಂದಿರಾಪುರಂನಲ್ಲಿ ಗುರುದ್ವಾರ ಸಮಿತಿಯವರು ಆಕ್ಸಿಜನ್ ಸಿಲಿಂಡರ್ ನೀಡುತ್ತಿದ್ದು, ಉಸಿರಾಟ ಸಮಸ್ಯೆ ಎದುರಾದ ಜನರು ಸ್ಥಳದಲ್ಲಿ ಕ್ಯೂ ನಿಲ್ಲುತ್ತಿದ್ದಾರೆ. ರಸ್ತೆ ಬದಿ ವಾಹನಗಳಲ್ಲಿಯೇ ರೋಗಿಗಳನ್ನು ಮಲಗಿಸಿ ಆಕ್ಸಿಜನ್ ನೀಡಲಾಗುತ್ತಿದೆ. ಸ್ಥಳದಲ್ಲೇ ಆಕ್ಸಿಜನ್ ಲೆವೆಲ್ ಪರೀಕ್ಷೆ ನಡೆಸುತ್ತಿದ್ದು, 50ಕ್ಕಿಂತ ಕಡಿಮೆ ಇದ್ದವರಿಗೆ ಆಕ್ಸಿಜನ್ ಸಿಲಿಂಡರ್ ಸಂಪರ್ಕ ನೀಡುತ್ತಿದ್ದಾರೆ. ನಾಲ್ಕರಿಂದ ಐದು ಗಂಟೆ ಕಾಲ ಆಕ್ಸಿಜನ್ ನೀಡಿದ ಬಳಿಕ ಸ್ವಸ್ಥರಾದಲ್ಲಿ ಮರಳಿ ಕಳಿಸಿಕೊಡುತ್ತಿದ್ದಾರೆ.

ಗಾಜಿಯಾಬಾದ್ ನಗರದಲ್ಲಿ 25 ಆಕ್ಸಿಜನ್ ಸಿಲಿಂಡರ್ ಗಳನ್ನು ಗುರುದ್ವಾರ ಸಮಿತಿಯಿಂದ ಒದಗಿಸಲಾಗಿದ್ದು ಗುರುವಾರದಿಂದ ಈವರೆಗೆ 700ಕ್ಕಿಂತಲೂ ಹೆಚ್ಚು ಮಂದಿಗೆ ಆಕ್ಸಿಜನ್ ನೀಡಲಾಗಿದೆ. 200ಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಸರತಿಯಲ್ಲಿದ್ದಾರೆ. ಇನ್ನಷ್ಟು ಆಕ್ಸಿಜನ್ ಪೂರೈಕೆ ಮಾಡಲು ನಮ್ಮಲ್ಲಿ ಖಾಲಿ ಸಿಲಿಂಡರ್ ಇಲ್ಲ ಎಂದು ಗುರುದ್ವಾರ ಕಮಿಟಿ ಅಧ್ಯಕ್ಷ ಗುರುಪ್ರೀತ್ ಸಿಂಗ್ ಹೇಳಿದ್ದಾರೆ. ಈ ನಡುವೆ, ಇಂದಿರಾಪುರಂ ಗುರುದ್ವಾರ ಕಮಿಟಿಯವರು ತಮ್ಮ ನಂಬರ್ ಕೊಟ್ಟಿದ್ದು, ನೋಂದಣಿ ಮಾಡಿಕೊಂಡೇ ಬರುವಂತೆ ಸೂಚಿಸುತ್ತಿದ್ದಾರೆ. ಗಾಜಿಯಾಬಾದ್ ಪೂರ್ವ ದೆಹಲಿಗೆ ಸಮೀಪ ಇರುವುದರಿಂದ ದೆಹಲಿ ಭಾಗದಿಂದಲೂ ಸೋಂಕಿತರು ಉಚಿತ ಆಕ್ಸಿಜನ್ ಪಡೆಯಲು ಬರುತ್ತಿದ್ದಾರೆ.

ಜನರು ಬೆಡ್ ಸಿಗದೆ ಪರದಾಡುತ್ತಿದ್ದು, ಅಂಥವರಿಗೆ ರಸ್ತೆಯಲ್ಲೇ ಆಕ್ಸಿಜನ್ ಪೂರೈಸುವ ಗುರುದ್ವಾರ ಸಮಿತಿಯವರ ಕೆಲಸದ ಬಗ್ಗೆ ಭಾರೀ ಶ್ಲಾಘನೆಯೂ ವ್ಯಕ್ತವಾಗಿದೆ. ಕೆಲವರು ರಸ್ತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಪೂರೈಸುವ ಸ್ಥಿತಿ ಬಂದಿರುವ ಉತ್ತರ ಪ್ರದೇಶ ಸರಕಾರದ ದುಸ್ಥಿತಿಯ ಬಗ್ಗೆ ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಆ ರೀತಿಯ ವಿಡಿಯೋಗಳು ಭಾರೀ ವೈರಲ್ ಆಗಿದ್ದು ಅಲ್ಲಿನ ವಾಸ್ತವ ಸ್ಥಿತಿಗೆ ಕನ್ನಡಿ ಹಿಡಿಯುತ್ತಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm