ಬ್ರೇಕಿಂಗ್ ನ್ಯೂಸ್
24-04-21 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಏ. 24: ದೆಹಲಿಯಲ್ಲಿ ಕೊರೊನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಮ್ಲಜನಕ ಸಿಗದೆ ಮತ್ತೆ 20 ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಶುಕ್ರವಾರ ನಗರದ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 20 ರೋಗಿಗಳು ಸಾವನ್ನಪ್ಪಿದ್ದಾರೆ. ಈಗಿರುವ ಆಮ್ಲಜನಕ ಮುಕ್ತಾಯಗೊಳ್ಳುವ ಹಂತ ತಲುಪಿದ್ದು, ವೆಂಟಿಲೇಟರ್ಗಳು ಬಿಐಪಿಎಪಿ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದೂ ಕೂಡ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ ಇನ್ನು 60 ರೋಗಿಗಳು ಅಪಾಯದಲ್ಲಿದ್ದು, ಭಾರಿ ಬಿಕ್ಕಟ್ಟು ಎದುರಾಗುವ ಆತಂಕ ಎದುರಾಗಿದೆ.

ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅಸ್ಪತ್ರೆಯ ಅಧಿಕಾರಿಗಳು ಐಸಿಯು ಮತ್ತು ತುರ್ತು ವಿಭಾಗಗಳಲ್ಲಿ ಮಾನವಚಾಲಿತ ವೆಂಟಿಲೇಷನ್ ಆಶ್ರಯಿಸಲು ಅಧಿಕಾರಿಗಳು ತೀವ್ರ ಪ್ರಯತ್ನ ನಡೆಸಿದ್ದಾರೆ.
ಕೇಂದ್ರ ದೆಹಲಿಯಲ್ಲಿರುವ ಈ ಆಸ್ಪತ್ರೆಯಲ್ಲಿ 500ಕ್ಕೂ ಹೆಚ್ಚು ಕೊರೊನಾ ರೋಗಿಗಳು ದಾಖಲಾಗಿದ್ದು, ಈ ಪೈಕಿ 150 ಮಂದಿಗೆ ಕ್ಷಿಪ್ರಗತಿಯ ಆಮ್ಲಜನಕ ನೆರವು ಒದಗಿಸಲಾಗಿದೆ.

ತಡರಾತ್ರಿ 5 ತಾಸುಗಳು ಆಮ್ಲಜನಕ ಪೂರೈಸಲು ಮಾತ್ರ ಅವಕಾಶವಿತ್ತು. ಇದನ್ನು ರಾತ್ರಿ 1 ಗಂಟೆವರೆಗೂ ರೋಗಿಗಳಿಗೆ ಪೂರೈಕೆ ಮಾಡಲಾಗಿದೆ. ತುರ್ತಾಗಿ ಆಮ್ಲಜನಕ ಪೂರೈಸುವಂತೆ ವಿತರಕರಿಗೆ ಮನವಿ ಮಾಡಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳಿಂದ ದೆಹಲಿಯ ಹಲವಾರು ಖಾಸಗಿ ಆಸ್ಪತ್ರೆಗಳಲ್ಲಿ ಹಾಹಾಕಾರ ಉಂಟಾಗಿದ್ದು, ರೋಗಿಗಳು ಪರಿತಪಿಸುವಂತಾಗಿದೆ. ಕಳೆದ ಒಂದು ದಿನದ ಹಿಂದಷ್ಟೇ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ 25 ಕೊರೊನಾ ಸೋಂಕಿತರು ಮೃತಪಟ್ಟಿದ್ದರು.
As many as 20 patients died on Friday night and more than 200 lives are currently at stake due to lack of oxygen at Delhi`s Jaipur Golden Hospital in Rohini, Medical Director D K Baluja has informed.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am