ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.
ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.
ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.
ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm