ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.

ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.

ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.

ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.

ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm