ಬ್ರೇಕಿಂಗ್ ನ್ಯೂಸ್
26-04-21 11:01 am Headline Karnataka News Network ದೇಶ - ವಿದೇಶ
Photo credits : REUTERS
ಬಾಗ್ದಾದ್, ಏ. 26: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದ ಬಾಗ್ದಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು 82 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಬಾಗ್ದಾದ್ನ ಅಲ್ ಖತೀಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಶನಿವಾರ ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದೆ. ನಂತರ ಆಸ್ಪತ್ರೆಯ ಇತರೆ ಅಂತಸ್ತುಗಳಿಗೂ ಬೆಂಕಿ ವ್ಯಾಪಿಸಿದೆ. ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದೆ.

ಈ ಘಟನೆಯಲ್ಲಿ ಒಟ್ಟು 82 ರೋಗಿಗಳು ಮೃತಪಟ್ಟಿದ್ದು, 110 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ರಕ್ಷಣೆ ಮಾಡಲಾಗಿದೆ.

ಆಸ್ಪತ್ರೆಗೆ ರಾತ್ರಿ ಪಾಳಿಗೆ ಬಂದ ನರ್ಸ್, ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ್ದಾರೆ. ತಕ್ಷಣವೇ ರೋಗಿಗಳನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ನೋಡನೋಡುತ್ತಿದ್ದಂತೆ ಎಲ್ಲೆಡೆ ಬೆಂಕಿ ವ್ಯಾಪಿಸಿ ಅವಘಡ ಸಂಭವಿಸಿದೆ.

ಘಟನೆ ಬೆನ್ನಲ್ಲೇ ಇರಾಕ್ ಪ್ರಧಾನಿ ಮುಸ್ತಾಫಾ ಅಲ್ ಖದಿಮಿ ಸಚಿವ ಸಂಪುತ ಸಭೆ ನಡೆಸಿದ್ದಾರೆ. ಈ ದುರಂತದಲ್ಲಿ ನಿರ್ಲಕ್ಷ್ಯತನ ಅಪರಾಧ ಎಂದು ಖಂಡಿಸಿದ್ದಾರೆ. ಆರೋಗ್ಯ ಸಚಿವ ಹಸನ್ ಅಲ್ ತಮಿಮಿ ಹಾಗೂ ಬಾಗ್ದಾದ್ ರಾಜ್ಯಪಾಲರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಸತ್ತವರಲ್ಲಿ 28 ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಾಗರಿಕ ರಕ್ಷಣಾ ತಂಡಗಳು ಭಾನುವಾರ ಬೆಳಗ್ಗಿನವರೆಗೂ ಬೆಂಕಿ ನಂದಿಸಿದ್ದಾರೆ.

ಆಸ್ಪತ್ರೆಯಲ್ಲಿ ಬೆಂಕಿಯಿಂದ ರಕ್ಷಿಸುವ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೆಂಕಿ ತೀವ್ರ ವ್ಯಾಪಿಸಿದೆ. ವೆಂಟಿಲೇಟರ್ಗಳನ್ನು ತೆಗೆದು ಸಾಗಿಸುವ ವೇಳೆ ಹಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಇರಾಕ್ ನಾಗರಿಕ ರಕ್ಷಣಾ ಘಟಕ ತಿಳಿಸಿದೆ.
A fire caused by an oxygen tank explosion at a COVID-19 hospital in Baghdad took at least 82 lives and forced some people to leap through windows out of the burning building, witnesses and authorities said on Sunday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm