ಬ್ರೇಕಿಂಗ್ ನ್ಯೂಸ್
28-04-21 10:15 am Headline Karnataka News Network ದೇಶ - ವಿದೇಶ
Photo credits : Indiatoday
ಮುಂಬೈ, ಏ. 28: ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆಯುತ್ತಿದ್ದಂತೆ ಮೂರು ಫೈರ್ ಇಂಜಿನ್ ಹಾಗೂ ಐದು ಆಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿವೆ. ಸ್ವಲ್ಪ ಸಮಯದಲ್ಲೇ ಬೆಂಕಿಯನ್ನು ನಂದಿಸಲಾಗಿದೆ. ಐಸಿಯುನಲ್ಲಿದ್ದ ಆರು ಮಂದಿ ಸೇರಿದಂತೆ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಿಂದ ಸಾಗಿಸುವ ಸಂದರ್ಭ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದರ್ ಅಹ್ವಾದ್ ತಿಳಿಸಿದ್ದಾರೆ. ಬೆಂಕಿಯಿಂದ ಆಸ್ಪತ್ರೆಯ ಮೊದಲ ಅಂತಸ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.

ಥಾಣೆ ಮುನಿಸಿಪಾಲ್ ಕಾರ್ಪೊರೇಷನ್, ಪೊಲೀಸರು ಹಾಗೂ ವೈದ್ಯಕೀಯ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಈಚೆಗಸ್ಟೆ ವಿರಾರ್ನಲ್ಲಿನ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.
Four patients died after a fire broke out at a private hospital near Thane, Maharashtra, on Wednesday morning.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am