ಬ್ರೇಕಿಂಗ್ ನ್ಯೂಸ್
28-04-21 10:15 am Headline Karnataka News Network ದೇಶ - ವಿದೇಶ
Photo credits : Indiatoday
ಮುಂಬೈ, ಏ. 28: ಮಹಾರಾಷ್ಟ್ರದ ಥಾಣೆಯಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮುಂಬ್ರಾದ ಕೌಸಾದಲ್ಲಿನ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 3.40ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆಯುತ್ತಿದ್ದಂತೆ ಮೂರು ಫೈರ್ ಇಂಜಿನ್ ಹಾಗೂ ಐದು ಆಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿವೆ. ಸ್ವಲ್ಪ ಸಮಯದಲ್ಲೇ ಬೆಂಕಿಯನ್ನು ನಂದಿಸಲಾಗಿದೆ. ಐಸಿಯುನಲ್ಲಿದ್ದ ಆರು ಮಂದಿ ಸೇರಿದಂತೆ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಿಂದ ಸಾಗಿಸುವ ಸಂದರ್ಭ ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದರ್ ಅಹ್ವಾದ್ ತಿಳಿಸಿದ್ದಾರೆ. ಬೆಂಕಿಯಿಂದ ಆಸ್ಪತ್ರೆಯ ಮೊದಲ ಅಂತಸ್ತು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಈ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ತಿಳಿಸಿದ್ದಾರೆ.

ಥಾಣೆ ಮುನಿಸಿಪಾಲ್ ಕಾರ್ಪೊರೇಷನ್, ಪೊಲೀಸರು ಹಾಗೂ ವೈದ್ಯಕೀಯ ಅಧಿಕಾರಿಗಳನ್ನು ಸಮಿತಿ ಒಳಗೊಂಡಿದೆ. ಈಚೆಗಸ್ಟೆ ವಿರಾರ್ನಲ್ಲಿನ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ 15 ಕೊರೊನಾ ರೋಗಿಗಳು ಸಾವನ್ನಪ್ಪಿದ್ದರು.
Four patients died after a fire broke out at a private hospital near Thane, Maharashtra, on Wednesday morning.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm