ಬ್ರೇಕಿಂಗ್ ನ್ಯೂಸ್
31-07-20 06:55 pm Headline Karnataka News Network ದೇಶ - ವಿದೇಶ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಮುಖ ಗಣ್ಯರ ಪಟ್ಟಿಯನ್ನು ಸಹ ಮಾಡಿಕೊಳ್ಳಲಾಗಿದೆ. ಈ ಪ್ರಕಾರ ಆಗಸ್ಟ್ 5ರಂದು ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 11.15ಕ್ಕೆ ಅಯೋಧ್ಯೆಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ಮೋದಿ ಬೆಳಗ್ಗೆ 11.15ಕ್ಕೆ ಅಯೋಧ್ಯೆಗೆ ಆಗಮಿಸಿ ಸುಮಾರು ಮೂರು ಗಂಟೆಗಳ ಸಮಯವನ್ನು ಕಳೆಯಲಿದ್ದು, ಮಧ್ಯಾಹ್ನ 2ಕ್ಕೆ ಮತ್ತೆ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ.
ಅಯೋಧ್ಯೆಗೆ ಆಗಮಿಸುತ್ತಿದ್ದಂತೆ ಹನುಮಾನ್ ಗರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ನಂತರ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಆಯೋಜಕರು ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಸೇರಿ ವೇದಿಕೆ ಮೇಲೆ ಐದು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ರಾಮ ಮಂದಿರ ಟ್ರಸ್ಟ್ನ ಮುಖ್ಯಸ್ಥ ಮಹಾಂತ್ ನೃತ್ಯಗೋಪಾಲ್ ದಾಸ್ ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದಿದ್ದಾರೆ.
ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿದ್ದು, ಉತ್ತರ ಪ್ರದೇಶ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರು ಭೂಮಿ ಪೂಜೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಿದ್ಧತೆಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am