ಬ್ರೇಕಿಂಗ್ ನ್ಯೂಸ್
01-05-21 11:57 am Headline Karnataka News Network ದೇಶ - ವಿದೇಶ
Photo credits : webmd
ನವದೆಹಲಿ, ಮೇ.01: ಭಾರತದಲ್ಲಿ ಕೊರೋನಾ ಆರ್ಭಟ ಭಾರೀ ಆತಂಕಕಾರಿ ಏರಿಕೆಯಾಗುತ್ತಿದ್ದು, ಶುಕ್ರವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಶುಕ್ರವಾರ ತಡರಾತ್ರಿಯವರೆಗೆ ಒಂದೇ ದಿನ 4 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ.
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದೇ ವೇಳೆ 3,498 ಸಾವು ಸಂಭವಿಸಿದ್ದವು. ಬಳಿಕ ತಡರಾತ್ರಿವರೆಗೆ 4 ಲಕ್ಷ ಪ್ರಕರಣಗಳು ವರದಿಯಾಗಿದೆ ಎಂದು ‘ಎಡೆಲ್ವೀಸ್’ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರ ಬೆಳಗ್ಗಿನವರೆಗಿನ ಅಂಕಿ ಅಂಶದ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 31.70 ಲಕ್ಷಕ್ಕೆ ತಲುಪಿದೆ. ಚೇತರಿಕೆ ಪ್ರಮಾಣ ಶೇ.81.99ಕ್ಕೆ ಕುಸಿತ ಕಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 1.87 ಕೋಟಿಗೆ ತಲುಪಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 2,08,330ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1.53 ಕೋಟಿ ಮಂದಿ ಗುಣಮುಖರಾಗಿದ್ದಾರೆ.

73% ಸೋಂಕು 10 ರಾಜ್ಯಗಳಲ್ಲಿ:
ಶುಕ್ರವಾರ ಬೆಳಗ್ಗಿನವರೆಗೆ ಪತ್ತೆಯಾಗಿರುವ ಹೊಸ ಸೋಂಕಿನ ಪೈಕಿ ಶೇ.73.05ರಷ್ಟುಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೇವಲ 10 ರಾಜ್ಯಗಳಲ್ಲಿ ದೃಢಪಟ್ಟಿದೆ. ಉತ್ತರ ಪ್ರದೇಶ, ದೆಹಲಿ, ಕೇರಳ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ರಾಜಸ್ಥಾನ ಉಳಿದ ರಾಜ್ಯಗಳು. ಇನ್ನು ದೇಶದ ಸಕ್ರಿಯ ಕೇಸುಗಳ ಪೈಕಿ ಶೇ.78.18ರಷ್ಟುಕೇವಲ 11 ರಾಜ್ಯಗಳಲ್ಲಿ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಹಾಗೆಯೇ ಶುಕ್ರವಾರ ಸೋಂಕಿಗೆ ಬಲಿಯಾದವರ ಪೈಕಿ ಶೇ.77.44ರಷ್ಟುಸಾವು 10 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರವೊಂದರಲ್ಲಿಯೇ 771 ಮೃತಪಟ್ಟಿದ್ದಾರೆ. ಉಳಿದಂತೆ ದೆಹಲಿಯಲ್ಲಿ 395, ಉತ್ತರ ಪ್ರದೇಶದಲ್ಲಿ 270, ಕರ್ನಾಟಕದಲ್ಲಿ 270, ಛತ್ತೀಸ್ಗಢದಲ್ಲಿ 251, ಗುಜರಾತ್ನಲ್ಲಿ 180, ರಾಜಸ್ಥಾನದಲ್ಲಿ 158ಮಂದಿ ಅಸುನೀಗಿದ್ದಾರೆ.
India's coronavirus cases hit a grim global record with 4,01,993 fresh infections in the last 24 hours. 3,523 deaths were reported. The third phase of the world's largest vaccination drive has started today even as several states flag shortage.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm