ಬ್ರೇಕಿಂಗ್ ನ್ಯೂಸ್
02-05-21 11:53 am Headline Karnataka News Network ದೇಶ - ವಿದೇಶ
Photo credits : Vincent Pulickal, EPS
ಕಾಸರಗೋಡು, ಮೇ 2: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು ಯಾರು ಗದ್ದುಗೆ ಹಿಡಿಯುತ್ತಾರೆಂದು ಇಂದೇ ನಿರ್ಣಯ ಆಗಲಿದೆ. ಈ ನಡುವೆ, ಕೇರಳದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
11 ಕ್ಕೆ ದೊರೆತ ಫಲಿತಾಂಶದ ಪ್ರಕಾರ ಸುರೇಂದ್ರನ್ ಹತ್ತು ಸುತ್ತುಗಳ ಬಳಿಕ 1700 ಮತಗಳಿಂದ ಮುನ್ನಡೆ ಗಳಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಮಂಜೇಶ್ವರದಲ್ಲಿ ಲೀಗ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಮತ್ತು ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ನಡುವೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಎರಡು ಅವಧಿಯಲ್ಲಿ ಲೀಗ್ ಅಭ್ಯರ್ಥಿ ಮಂಜೇಶ್ವರ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು.
2016ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೇವಲ 87 ಮತಗಳಿಂದ ಸೋತಿದ್ದರು. ಲೀಗ್ ಅಭ್ಯರ್ಥಿ ಅಬ್ದುಲ್ ರಜಾಕ್ ಗೆಲುವು ಕಂಡಿದ್ದರು. ಆದರೆ, ರಜಾಕ್ ನಿಧನದಿಂದ 2018 ರಲ್ಲಿ ಉಪ ಚುನಾವಣೆ ನಡೆದ ವೇಳೆ ಬಿಜೆಪಿ ಈ ಕ್ಷೇತ್ರದಲ್ಲಿ ಸುಮಾರು ಐದು ಸಾವಿರ ಮತಗಳಿಂದ ಸೋಲು ಕಂಡಿತ್ತು. ಆಗ ಬಿಜೆಪಿಯಲ್ಲಿ ಕುಂಟಾರು ರವೀಶ ತಂತ್ರಿ ಅಭ್ಯರ್ಥಿಯಾಗಿದ್ದರು.

ಬಿಜೆಪಿ ಈ ಬಾರಿ ಮತ್ತೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದ್ದು ಗೆಲುವು ಸಿಗಲೇಬೇಕೆಂದು ಭಾರೀ ಕಸರತ್ತು ನಡೆಸಿದೆ. ಲೀಗ್ ಅಭ್ಯರ್ಥಿ ಕುರಿತ ಅಸಮಾಧಾನ ಮತ್ತು ಒಳಜಗಳ ಬಿಜೆಪಿಗೆ ಈ ಬಾರಿ ಲಾಭವಾಗಬಹುದೆಂಬ ಲೆಕ್ಕಾಚಾರ ಕೆಲವರದ್ದು.
ಈ ನಡುವೆ, ಇಲ್ಲಿ ಸಿಪಿಎಂ ಅಭ್ಯರ್ಥಿ ರಮೇಶನ್ ಎಷ್ಟರ ಮಟ್ಟಿಗೆ ಮತಗಳನ್ನು ಗಳಿಸುತ್ತಾರೆ ಅದು ಕೂಡ ಬಿಜೆಪಿ ಗೆಲುವನ್ನು ನಿರ್ಧರಿಸುತ್ತದೆ ಎನ್ನಲಾಗಿತ್ತು. ಅಂತಿಮ ಕ್ಷಣದಲ್ಲಿ ಯಾರೇ ಗೆದ್ದರೂ ಈ ಬಾರಿ ಅತ್ಯಂತ ಕಡಿಮೆ ಮತಗಳಿಂದ ಎನ್ನುವ ಸಮೀಕ್ಷೆಯ ಸತ್ಯವಾಗುವ ಸಾಧ್ಯತೆಯಿದೆ.
Indian Union Muslim League (IUML)’s AKM Ashraf is facing competition from Bharatiya Janata Party leader (BJP) K Surendran and Left Democratic Front (LDF)’s VV Rameshan.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm